ಬುರ್ಹಾನ್ಪುರ್: ಲಂಡನ್ ನಲ್ಲಿ ನಡೆದ ಚ್ಯಾಂಪಿಯನ್ಸ್ ಟ್ರೋಫಿಯ ಅಂತಿಮ ಪಂದ್ಯದಲ್ಲಿ ಭಾರತದ ವಿರುದ್ಧ ಗೆಲುವು ಸಾಧಿಸಿದ ಪಾಕಿಸ್ತಾನದ ಪರ ಘೋಷಣೆ ಕೂಗಿ, ಪಟಾಕಿ ಸಿಡಿಸಿ ಸಂಭ್ರಮಿಸಿದ ಆರೋಪದ ಮೇಲೆ ಬಂಧಿಸಲಾಗಿದ್ದ 15 ಮುಸ್ಲಿಂ ಯುವಕರ ವಿರುದ್ಧದ ದೇಶದ್ರೋಹದ ಆರೋಪವನ್ನು ಕೈಬಿಡಲು ಮಧ್ಯಪ್ರದೇಶ ಸರ್ಕಾರ ಗುರುವಾರ ನಿರ್ಧರಿಸಿದೆ.