ಶ್ರೀನಗರ: ಶ್ರೀನಗರದ ನೌಹಟ್ಟಾದಲ್ಲಿರುವ ಜಮೀಯಾ ಮಸೀದಿ ಬಳಿ ಕರ್ತವ್ಯ ನಿರತ ಪೊಲೀಸ್ ಅಧಿಕಾರಿಯನ್ನು ಕಲ್ಲು ಹೊಡೆದು ಸಾಯಿಸಿದ ಪ್ರಕರಣವನ್ನು ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರು ಶುಕ್ರವಾರ ತೀವ್ರವಾಗಿ ಖಂಡಿಸಿದ್ದು, ಭದ್ರತಾ ಪಡೆಗಳ ತಾಳ್ಮೆ ಪರೀಕ್ಷಿಸಬೇಡಿ ಎಂದು ಎಚ್ಚರಿಕೆ ನೀಡಿದ್ದಾರೆ.