ಪಾಟ್ನಾ: ಜುಲೈ ತಿಂಗಳಿನಲ್ಲಿ ರಾಷ್ಟ್ರಪತಿ ಚುನಾವಣೆಗೆ ವಿರೋಧ ಪಕ್ಷಗಳು ಲೋಕಸಭಾ ಮಾಜಿ ಸ್ಪೀಕರ್ ಮೀರಾ ಕುಮಾರಿ ಅವರನ್ನು ಕಣಕ್ಕಿಳಿಸಿದ್ದು, ಎನ್ ಡಿಎ ಅಭ್ಯರ್ಥಿ ರಾಮನಾಥ್ ಕೋವಿಂದ್ ಅವರಿಗೆ ತಾವು ಬೆಂಬಲ ನೀಡುವುದಾಗಿ ಜೆಡಿಯು ಸ್ಪಷ್ಟಪಡಿಸಿದೆ.
ರಾಮನಾಥ್ ಕೋವಿಂದ್ ಅವರಿಗೆ ತಮ್ಮ ಸಂಪೂರ್ಣ ಬೆಂಬಲ ನೀಡುವ ನಿರ್ಧಾರದಲ್ಲಿ ಯಾವುದೇ ಬದಲಾವಣೆಯಿಲ್ಲ, ಇದರಲ್ಲಿ ಎರಡನೇ ಯೋಚನೆಯಿಲ್ಲ ಎಂದು ಜೆಡಿಯು ಮುಖಂಡ ಕೆಸಿ ತ್ಯಾಗಿ ಹೇಳಿದ್ದಾರೆ.
ಕೋವಿಂದ್ ಸಾಮರ್ಥ್ಯವುಳ್ಳ ವ್ಯಕ್ತಿಯಾಗಿದ್ದಾರೆ ಹೀಗಾಗಿ ಅವರಿಗೆ ಜೆಡಿಯು ಬೆಂಬಲ ನೀಡಲು ನಿರ್ಧರಿಸಿದೆ ಎಂದು ಹೇಳಿದ್ದಾರೆ.
ಬಿಹಾರದ ರಾಜ್ಯಪಾಲರಾಗಿದ್ದ ವೇಳೆ ಕೋವಿಂದ್ ಸಾಂವಿಧಾನಿಕ ಕರ್ತವ್ಯವನ್ನು ಉತ್ತಮವಾಗಿ ನಿಭಾಯಿಸಿದ್ದಾರೆ ಎಂದು ತ್ಯಾಗಿ ತಿಳಿಸಿದ್ದಾರೆ.