ಈ ಹೇಳಿಕೆ ನೀಡುವ ಮುನ್ನ ಸಚಿವ ನಾಯ್ಡು ಅವರು ಫ್ಯಾಶನ್ ಶೋದಲ್ಲಿ ಭಾಗವಹಿಸಿದ್ದರೇ? ದೇಶಾದ್ಯಂತ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ತಾವು ಬೆಳೆದ ಉತ್ಪನ್ನಗಳಿಗೆ ಸರಿಯಾದ ಬೆಲೆ ಅವರಿಗೆ ಸಿಗುತ್ತಿಲ್ಲ. ಸರಿಯಾದ ವೇತನವಿಲ್ಲ. ಹೀಗಾಗಿ ಸಾಲಬಾಧೆಯನ್ನು ತಪ್ಪಿಸಲು ಸಾಲ ಮನ್ನಾ ಮಾಡುವಂತೆ ಕೇಳಿಕೊಳ್ಳುತ್ತಾರೆ ಎಂದು ಶಿವಸೇನಾ ನಾಯಕ ಮತ್ತು ಸಾರಿಗೆ ಸಚಿವ ದಿವಾಕರ್ ರಾವೊಟೆ ಮುಂಬೈಯಲ್ಲಿ ಸುದ್ದಿಗಾರರಿಗೆ ತಿಳಿಸಿದರು.