ಆಯೂಬ್ ಪಂಡಿತ್ ಹತ್ಯೆ ಪ್ರಕರಣ: ಹಿರಿಯ ಪೊಲೀಸ್ ಅಧಿಕಾರಿ ವರ್ಗಾವಣೆ

ಜಮ್ಮು ಮತ್ತು ಕಾಶ್ಮೀರದಲ್ಲಿ ಕರ್ತವ್ಯ ನಿರತ ಪೊಲೀಸ್ ಅಧಿಕಾರಿಯನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರನ್ನು ವರ್ಗಾವಣೆ ಮಾಡಲಾಗಿದೆ ಎಂದು ಶನಿವಾರ ತಿಳಿದುಬಂದಿದೆ...
ಜಮ್ಮು ಮತ್ತು ಕಾಶ್ಮೀರದ ಪೊಲೀಸ್ ಮಹಾನಿರ್ದೇಶಕ ಎಸ್.ಪಿ.ವೈದ್
ಜಮ್ಮು ಮತ್ತು ಕಾಶ್ಮೀರದ ಪೊಲೀಸ್ ಮಹಾನಿರ್ದೇಶಕ ಎಸ್.ಪಿ.ವೈದ್
Updated on
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಕರ್ತವ್ಯ ನಿರತ ಪೊಲೀಸ್ ಅಧಿಕಾರಿಯನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರನ್ನು ವರ್ಗಾವಣೆ ಮಾಡಲಾಗಿದೆ ಎಂದು ಶನಿವಾರ ತಿಳಿದುಬಂದಿದೆ. 
ಪೊಲೀಸ್ ಅಧೀಕ್ಷಕ (ಉತ್ತರ ಶ್ರೀನಗರ) ಸಾಜದ್ ಖಾಲಿಕ್ ಭಟ್ ಎಂಬುವವರನ್ನು ಪೊಲೀಸ್ ಮಹಾನಿರ್ದೇಶಕ ಎಸ್.ಪಿ.ವೈದ್ ಅವರು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ. 
ಆಯುಬ್ ಪಂಡಿತ್ ಅವರ ಪ್ರಕರಣ ಸಂಬಂಧ ಕೂಡಲೇ ವರದಿ ಸಲ್ಲಿಸುವಂತೆ ನಿನ್ನೆಯಷ್ಟೇ ವೈದ್ ಅವರು ಖಾಲಿಕ್ ಭಟ್ ಅವರಿಗೆ ಸೂಚನೆ ನೀಡಿದ್ದರು. ಇದರ ಬೆನ್ನಲ್ಲೇ ಇದೀಗ ಭಟ್ ಅವರನ್ನು ವರ್ಗಾವಣೆ ಮಾಡಲಾಗಿದೆ.
ರಂಜಾನ್ ಪ್ರಾರ್ಥನೆ ಹಿನ್ನಲೆಯಲ್ಲಿ ಶ್ರೀನಗರ ಜಮಿಯಾ ಮಸೀದಿ ಬಳಿ ಆಯೂಬ್ ಪಂಡಿತ್ ಎಂಬ ಹಿರಿಯ ಪೊಲೀಸ್ ಅಧಿಕಾರಿಯನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಕರ್ತವ್ಯ ನಿರ್ವಹಿಸುತ್ತಿದ್ದ ಅಧಿಕಾರಿಯ ಮೇಲೆ ಕಲ್ಲು ತೂರಾಟಗಾರರು ಮುಗಿಬಿದ್ದು, ಹಲ್ಲೆ ನಡೆಸಿ ಹತ್ಯೆ ಮಾಡಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com