ಹಿಂದುಳಿದ ಜಾತಿಯ(ಒಬಿಸಿ) ಮೀಸಲಾತಿ ಸೌಲಭ್ಯ ಒದಗಿಸುವ ಕುರಿತು ಶೀಘ್ರದಲ್ಲೇ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳುವುದಾಗಿ ರಾಜ್ಯ ಸರ್ಕಾರ ಭರವಸೆ ನೀಡಿದ ಹಿನ್ನೆಲೆಯಲ್ಲಿ ಜಾಟ್ ನಾಯಕರು ತಮ್ಮ ಪ್ರತಿಭಟನೆಯನ್ನು ಹಿಂಪಡೆದಿದ್ದಾರೆ. ಆದರೆ ಭರತ್ ಪುರ ಮತ್ತು ಧೋಲಾಪುರ್ ಜಿಲ್ಲೆಯ ಜಾಟ್ ಸಮುದಾಯವನ್ನು ಒಬಿಸಿಗೆ ಸೇರಿಸುವ ಕುರಿತು ಲಿಖಿತ ಭರವಸೆ ನೀಡಬೇಕು. ಇಲ್ಲದಿದ್ದರೆ ದೇಶದ ಇತರೆ ಭಾಗಗಳಿಗೂ ತಮ್ಮ ಹೋರಾಟವನ್ನು ವಿಸ್ತರಿಸುವುದಾಗಿ ಎಚ್ಚರಿಸಿದ್ದಾರೆ.