ಪೊಲೀಸ್ ಅಧಿಕಾರಿ ಹತ್ಯೆ ಪ್ರಕರಣ ಸಂಬಂಧ ನಿನ್ನೆಯಷ್ಟೇ ಪ್ರತಿಕ್ರಿಯೆ ನೀಡಿದ್ದ ಮಿರ್ ವಾಯಿಜ್ ಅವರು, ಆಯುಬ್ ಪಂಡಿತ್ ಅವರ ಹತ್ಯೆ ಪ್ರಕರಣ ಸಾಕಷ್ಟು ಬೇಸರವನ್ನುಂಟು ಮಾಡಿದೆ. ಆದರೆ, ಪ್ರಕರಣ ಸಂಬಂಧ ಮಾಧ್ಯಮಗಳು ಮಾಡುತ್ತಿರುವ ವರದಿ ತಪ್ಪಾಗಿವೆ. ಘಟನೆ ನಡೆದ ಸಂದರ್ಭದಲ್ಲಿ ನಾನು ಕೂಡ ಮಸೀದಿಯೊಳಗಿದ್ದೆ. 12.15ರ ಸುಮಾರಿಗೆ ನಾನು ಮಸೀದಿಗೆ ತೆರಳಿದ್ದೆ. ಅದಕ್ಕೂ ಮುನ್ನವೇ ಘಟನೆ ನಡೆದು ಹೋಗಿತ್ತು.