ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ರಾಷ್ಟ್ರಪತಿ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಮೀರಾಕುಮಾರ್​ಗೆ ಜೆಡಿಎಸ್​ ಬೆಂಬಲ!

ರಾಷ್ಟ್ರಪತಿ ಚುನಾವಣೆಯಲ್ಲಿ ಯುಪಿಎ ಬೆಂಬಲಿತ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮೀರಾಕುಮಾರ್​ ಅವರಿಗೆ ಜೆಡಿಎಸ್​ ಭಾನುವಾರ ಅಧಿಕೃತವಾಗಿ ಬೆಂಬಲ ಸೂಚಿಸಿದೆ.
Published on

ಬೆಂಗಳೂರು: ರಾಷ್ಟ್ರಪತಿ ಚುನಾವಣೆಯಲ್ಲಿ ಯುಪಿಎ ಬೆಂಬಲಿತ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮೀರಾಕುಮಾರ್​ ಅವರಿಗೆ ಜೆಡಿಎಸ್​ ಭಾನುವಾರ ಅಧಿಕೃತವಾಗಿ ಬೆಂಬಲ ಸೂಚಿಸಿದೆ.

ಇಂದು ಬೆಳಗ್ಗೆ ಕಾಂಗ್ರೆಸ್ ಮುಖಂಡ ಗುಲಾಂನಬಿ ಅಜಾದ್ ಅವರು ಎಚ್ ಡಿ ದೇವೇಗೌಡ ಅವರಿಗೆ ಕರೆ ಮಾಡಿ ಮೀರಾ ಕುಮಾರ್ ಅವರಿಗೆ ಬೆಂಬಲ ನೀಡುವಂತೆ ಮನವಿ ಮಾಡಿರುವ ಹಿನ್ನಲೆಯಲ್ಲಿ ಜೆಡಿಎಸ್​ ವರಿಷ್ಠ  ಎಚ್​.ಡಿ.ದೇವೇಗೌಡ ಬೆಂಬಲ ಸೂಚಿಸಿದ್ದಾರೆ.  ಈ ಹಿನ್ನೆಲೆಯಲ್ಲಿ ಭಾನುವಾರ ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಮೀರಾಕುಮಾರ್​ ಅವರ ನಾಮಪತ್ರಕ್ಕೆ ಸೂಚಕರಾಗಿ ಸಹಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಅಂತೆಯೇ ಕುಪೇಂದ್ರ ರೆಡ್ಡಿ, ಮಧು ಬಂಗಾರಪ್ಪ ಸೇರಿದಂತೆ ಜೆಡಿಎಸ್ ನ ಹಲವು ಸಂಸದ ಹಾಗೂ ಶಾಸಕರು ಮೀರಾ ಕುಮಾರ್ ಅವರಿಗೆ ಬೆಂಬಲಿಸಿ ಸಹಿ ಹಾಕಿದ್ದಾರೆ.

ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ ಅವರು, "ಮೀರಾ ಕುಮಾರ್​ ಅವರಿಗೆ ಬೆಂಬಲ ನೀಡುವಂತೆ ದೇವೇಗೌಡ ಅವರು ಪಕ್ಷದ ಶಾಸಕರಿಗೆ ಸೂಚನೆ ನೀಡಿದ್ದಾರೆ. ಮೀರಾ ಕುಮಾರ್​ ಅವರಿಗೆ  ಬೆಂಬಲಿಸುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಗುಲಾಂ ನಬಿ ಆಜಾದ್​ ದೇವೇಗೌಡ ಅವರೊಂದಿಗೆ ದೂರವಾಣಿಯಲ್ಲಿ ಮನವಿ ಮಾಡಿದ್ದರು" ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com