ಕೆಲ ಕೈದಿಗಳು ಜೈಲಿನ ಮೇಲ್ಚಾವಣಿ ಹತ್ತಿದ್ದು, ದಿನ ಪತ್ರಿಕೆಗಳನ್ನು ಸುಟ್ಟುಹಾಕಿದ್ದಾರೆ. ಈ ಹಿನ್ನಲೆಯಲ್ಲಿ ಇಂದ್ರಾಣಿ ಸೇರಿದಂತೆ 200 ಕೈದಿಗಳ ವಿರುದ್ಧ ಗಲಭೆಗೆ ಕುಮ್ಮಕ್ಕು, ಸಾರ್ವಜನಿಕ ಸೇವಕರ ಮೇಲೆ ಹಲ್ಲೆ, ಜೈಲಿನ ಆಸ್ತಿ ನಾಶ ಸೇರಿದಂತೆ ಭಾರತೀಯ ದಂಡ ಸಂಹಿತೆಯ ಪ್ರಕಾರ ಹಲವು ಪ್ರಕರಣಗಳನ್ನು ದಾಖಲು ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.