2025ರ ವರೆಗೂ ಬಿಹಾರದಲ್ಲಿ ಮಹಾ ಮೈತ್ರಿ ಮುಂದುವರಿಯಲಿದೆ: ಜೆಡಿ(ಯು)

ರಾಷ್ಟ್ರಪತಿ ಚುನಾವಣೆ ಸರ್ಕಾರದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ, ಹೀಗಾಗಿ ಬಿಹಾರದಲ್ಲಿ ರಾಷ್ಟ್ರೀಯ ಜನತಾ ದಳದ ಜೊತೆ ಜೆಡಿ(ಯು) ...
ಕೆ.ಸಿ ತ್ಯಾಗಿ
ಕೆ.ಸಿ ತ್ಯಾಗಿ
ನವದೆಹಲಿ: ರಾಷ್ಟ್ರಪತಿ ಚುನಾವಣೆ ಸರ್ಕಾರದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ, ಹೀಗಾಗಿ ಬಿಹಾರದಲ್ಲಿ  ರಾಷ್ಟ್ರೀಯ ಜನತಾ ದಳದ ಜೊತೆ ಜೆಡಿ(ಯು) ಮಹಾಮೈತ್ರಿ 2025ರ ವರೆಗೆ ಮುಂದುವರಿಯುತ್ತದೆ ಎಂದು ಜೆಡಿಯು ಮುಖಂಡ ಕೆ.ಸಿ ತ್ಯಾಗಿ ಹೇಳಿದ್ದಾರೆ.
ಪಕ್ಷದೊಳಗೆ ಯಾವುದೇ ಒಳಜಗಳವಿಲ್ಲ, ಬಿಹಾರದಲ್ಲಿನ ನಮ್ಮ ಮೈತ್ರಿ ಪ್ರಬಲವಾಗಿದೆ. ರಾಷ್ಟ್ರಪತಿ ಚುನಾವಣೆಯಲ್ಲಿ ಅಭ್ಯರ್ಥಿ ಬೆಂಬಲಿಸುವ ಸಂಬಂಧ ಯಾವುದೇ ಭಿನ್ನಾಬಿಪ್ರಾಗಳಿಲ್ಲ, ಇದು ಮೈತ್ರಿಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಆರ್ ಜೆಡಿ ಮುಖಂಡ ಲಾಲು ಪ್ರಸಾದ್ ಯಾದವ್ ಮೀರಾ ಕುಮಾರ್ ಅವರಿಗೆ ಬೆಂಬಲ ಸೂಚಿಸಿದ್ದಾರೆ, ಮುಖ್ಯಮಂತ್ರಿ ನಿತೀಶ್ ಕುಮಾರ್ ಎನ್ ಡಿ ಎ ಅಭ್ಯರ್ಥಿ ರಾಮ್ ನಾಥ್ ಕೋವಿಂದ್ ಅವರಿಗೆ ತಮ್ಮ ಬೆಂಬಲ ವ್ಯಕ್ತ ಪಡಿಸಿದ್ದಾರೆ.
ಬಿಹಾರ್ ಕಿ ಭೇಟಿ ಮೀರಾ ಕುಮಾರ್ ಮೀರಾ ವಿರೋಧ ಪಕ್ಷದ ರಾಷ್ಟ್ರಪತಿ ಅಭ್ಯರ್ಥಿಯಾಗಿದ್ದಾರೆ, ಆದರೆ ಅವರಿಗೆ ಸೋಲು ಖಚಿತ ಎಂಬ ರೀತಿಯಲ್ಲಿ ನಿತೀಶ್ ಕುಮಾರ್ ಹೇಳಿಕೆ ನೀಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com