ತನ್ನ ತಾಯಿ ಸಾವಿಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೀಮಾ ತಂದೆ ಶಾಂತಿ ಸ್ವರೂಪ್ ರೊಂದಿಗೆ ಮಾನ್ವಿ ಪೊಲೀಸರಿಗೆ ದೂರು ನೀಡಿದ್ದಳು. ಆದರೆ ಪೊಲೀಸರು ಯಾವುದೇ ಕ್ರಮ ಕೈಗೊಳ್ಳಲಿಲ್ಲ. ಲಂಚ ಕೊಟ್ಟರೆ ಮಾತ್ರ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ ಎಂದು ಮನೆಯಲ್ಲಿ ಹಿರಿಯರು ಮಾತನಾಡುತ್ತಿರುವುದನ್ನು ಕೇಳಿಸಿಕೊಂಡ ಮಾನ್ವಿ ಕಳೆದ ಮಂಗಳವಾರ ತನ್ನ ಪಿಗ್ಗಿ ಬ್ಯಾಂಕ್ ನೊಂದಿಗೆ ಮೀರತ್ ಪೊಲೀಸ್ ಮಹಾ ನಿರ್ದೇಶಕ ರಾಮ್ ಕುಮಾರ್ ಅವರನ್ನು ಭೇಟಿ ಮಾಡಿ, ಇದನ್ನು ತೆಗೆದುಕೊಂಡು ನನ್ನ ತಾಯಿ ಆತ್ಮಹತ್ಯೆಗೆ ಕಾರಣರಾದವರನ್ನು ಬಂಧಿಸುವಂತೆ ಮನವಿ ಮಾಡಿದ್ದಾಳೆ.