ಬೆಂಗಳೂರು: ಪೇಜಾವರ ಶ್ರೀಗಳ ವಿರುದ್ಧ ಆಕ್ಷೇಪಾರ್ಹ ಪೋಸ್ಟ್; ವ್ಯಕ್ತಿ ಬಂಧನ

ಉಡುಪಿಯ ಶ್ರೀ ಕೃಷ್ಣಮಠದಲ್ಲಿ ಮುಸ್ಲಿಂರಿಗೆ ಇಫ್ತಾರ್ ಆಯೋಜಿಸಿದ್ದ ಪೇಜಾವರ ಶ್ರೀಗಳ ವಿರುದ್ಧ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಆಕ್ಷೇಪಾರ್ಹ ಪೋಸ್ಟ್ ಹಾಕಿದ್ದ...
ಪೇಜಾವರ ಶ್ರೀ
ಪೇಜಾವರ ಶ್ರೀ
ಮಂಗಳೂರು: ಉಡುಪಿಯ ಶ್ರೀ ಕೃಷ್ಣಮಠದಲ್ಲಿ ಮುಸ್ಲಿಂರಿಗೆ ಇಫ್ತಾರ್ ಆಯೋಜಿಸಿದ್ದ ಪೇಜಾವರ ಶ್ರೀಗಳ ವಿರುದ್ಧ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಆಕ್ಷೇಪಾರ್ಹ ಪೋಸ್ಟ್ ಹಾಕಿದ್ದ ವ್ಯಕ್ತಿಯೊರ್ವನನ್ನು ಪೊಲೀಸರು ಬಂಧಿಸಿದ್ದಾರೆ. 
ವಿಶ್ವೇಶ ತೀರ್ಥ ಸ್ವಾಮೀಜಿ ಅವರು "ಸಾಮರಸ್ಯ ಹಬ್ಬ' ಮುಸ್ಲಿಂರಿಗೆ ಇಫ್ತಾರ್ ಆಯೋಜಿಸಿದ್ದರು. ಇದಕ್ಕೆ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ವಿರೋಧ ವ್ಯಕ್ತಪಡಿಸಿದ್ದರು. ಮುತಾಲಿಕ್ ರನ್ನು ಬೆಂಬಲಿಸಿ ಪೇಜಾವರ್ ಶ್ರೀಗಳ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ವಿವೇಕ್ ಕಡೇಮನೆ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ. 
ಪೇಜಾವರ ಶ್ರೀಗಳ ರಕ್ತ ನಿಧಿ ತಂಡದ ಸದಸ್ಯರಾಗಿರುವ ಆರೀಫ್, ಅನ್ಸಾರಿ ಮತ್ತು ಅಹಮ್ಮದ್ ಎಂಬುವರು ವಿವೇಕ್ ಕಡೇಮನೆ ವಿರುದ್ಧ ದೂರು ದಾಖಲಿಸಿದ್ದರು. 
ಪವಿತ್ರ ಶ್ರೀಕೃಷ್ಣ ಮಠದಲ್ಲಿ ಮುಸ್ಲಿಂರಿಗೆ ಇಫ್ತಾರ್ ಹಾಗೂ ನಮಾಜ್ ಮಾಡಲು ಅನುವು ಮಾಡಿಕೊಡುವ ಮೂಲಕ ಪೇಜಾವರ ಶ್ರೀಗಳು ಹಿಂದೂ ಧಾರ್ಮಿಕತೆಗೆ ದಕ್ಕೆ ತಂದಿದ್ದಾರೆ ಎಂದು ಪ್ರಮೋದ್ ಮುತಾಲಿಕ್ ಆರೋಪಿಸಿದ್ದರು. ಅಲ್ಲದೆ ಈ ಸಂಬಂಧ ಜುಲೈ 2ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ಮುತಾಲಿಕ್ ಘೋಷಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com