ಜಾರ್ಖಾಂಡ್' ಹತ್ಯೆ ಪ್ರಕರಣವನ್ನು ಧಾರ್ಮಿಕ ದೃಷ್ಟಿಕೋನದಲ್ಲಿ ನೋಡಬಾರದು: ವೆಂಕಯ್ಯ ನಾಯ್ಡು
ಗೋಮಾಂಸ ಸಾಗಣೆ ಮಾಡುತ್ತಿದ್ದಾನೆಂದು ಶಂಕಿಸಿ ಜಾರ್ಖಾಂಡ್ ನಲ್ಲಿ ನಡೆದ ಮುಸ್ಲಿಂ ವ್ಯಕ್ತಿ ಹತ್ಯೆ ಪ್ರಕರಣಕ್ಕೆ ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಅವರು ತೀವ್ರ ಖಂಡನೆಯನ್ನು ವ್ಯಕ್ತಪಡಿಸಿದ್ದು, ಪ್ರಕರಣವನ್ನು ಧಾರ್ಮಿಕ ದೃಷ್ಟಿಕೋನದಲ್ಲಿ ನೋಡಬಾರದು...
ನವದೆಹಲಿ: ಗೋಮಾಂಸ ಸಾಗಣೆ ಮಾಡುತ್ತಿದ್ದಾನೆಂದು ಶಂಕಿಸಿ ಜಾರ್ಖಾಂಡ್ ನಲ್ಲಿ ನಡೆದ ಮುಸ್ಲಿಂ ವ್ಯಕ್ತಿ ಹತ್ಯೆ ಪ್ರಕರಣಕ್ಕೆ ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಅವರು ತೀವ್ರ ಖಂಡನೆಯನ್ನು ವ್ಯಕ್ತಪಡಿಸಿದ್ದು, ಪ್ರಕರಣವನ್ನು ಧಾರ್ಮಿಕ ದೃಷ್ಟಿಕೋನದಲ್ಲಿ ನೋಡಬಾರದು ಎಂದು ಶುಕ್ರವಾರ ಹೇಳಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು, ಪ್ರತೀಯೊಬ್ಬರೂ ಖಂಡಿಸುವಂತಹ ಪ್ರಕರಣ ಇದಾಗಿದೆ. ಪ್ರಧಾನಮಂತ್ರಿಗಳೂ ಕೂಡ ಇದನ್ನು ಖಂಡಿಸುತ್ತಾರೆ. ದೇಶದ ಇತರೆ ಭಾಗಗಳಲ್ಲಿಯೂ ಈ ರೀತಿಯ ಘಟನೆಗಳು ನಡೆಯುತ್ತಿವೆ. ಇದು ನಿಜಕ್ಕೂ ನಾಚಿಕೆ ಪಡುವಂತಹ, ಅನಾರಿಕ ಹಾಗೂ ಕ್ರೂರ ವರ್ತನೆಯಾಗಿದೆ ಎಂದು ಹೇಳಿದ್ದಾರೆ.
ಈ ರೀತಿಯ ಪ್ರಕರಣಗಳಿಗೆ ಧಾರ್ಮಿಕ ಬಣ್ಣವನ್ನು ನೀಡಬಾರದು. ಇಂತಹ ಘಟನೆಗಳು ಭವಿಷ್ಯದಲ್ಲಿ ಮರುಕಳಿಸದಂತೆ ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ತಿಳಿಸಿದ್ದಾರೆ.