ನವದೆಹಲಿ: ಕೇಂದ್ರ ಸರ್ಕಾರ ಬಹು ನಿರೀಕ್ಷಿತ ಸರಕು ಮತ್ತು ಸೇವಾ ತೆರಿಗೆ(ಜಿಎಎಸ್ ಟಿ) ಜಾರಿಯನ್ನು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಕಟುವಾಗಿ ಟೀಕಿಸಿದ್ದು, ಇದೊಂದು ತಮಾಷೆ ಎಂದಿದ್ದಾರೆ. ಅಲ್ಲದೆ ಯಾವುದೇ ಪೂರ್ವ ಸಿದ್ಧತೆ ಅಥವಾ ಮುನ್ನೋಟವಿಲ್ಲದೆ ಕೇವಲ ಸ್ವ ಪ್ರಚಾರಕ್ಕಾಗಿ ಮಧ್ಯರಾತ್ರಿ ಜಾರಿಗೊಳಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.