ಅಲಿಮುದ್ದೀನ್ ವಾಹನದಲ್ಲಿ ದನದ ಮಾಂಸ ಸಾಗಣೆ ಮಾಡುತ್ತಿದ್ದಾರೆಂದು ಶಂಕಿಸಿದ್ದ ದುಷ್ಕರ್ಮಿಗಳು ವಾಹನವನ್ನು ತಡೆದು ಚಾಕು ಇರಿದಿದ್ದಾರೆ. ಅಲ್ಲದೆ, ವಾಹನಕ್ಕೆ ಬೆಂಕಿ ಹಚ್ಚುವ ಮೂಲಕ ಪೈಶಾಚಿಕ ಕೃತ್ಯವೆಸಗಿದ್ದಾರೆ. ಈ ವೇಳೆ ಸ್ಥಳಕ್ಕಾಗಮಿಸಿದ ಪೊಲೀಸರು ಸಂತ್ರಸ್ತ ಅಲಿಮುದ್ದೀನ್ ನನ್ನು ರಕ್ಷಣೆ ಮಾಡಿ, ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅಲಿಮುದ್ದೀನ್ ಸಾವನ್ನಪ್ಪಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.