ಶಶಿಕಲಾ ಗೆ ಎಸಿ, ಹಾಸಿಗೆ ಒದಗಿಸಿಲ್ಲ: ಸ್ಥಳಾಂತರಕ್ಕೆ ಅರ್ಜಿ ಸಲ್ಲಿಸಿಲ್ಲ: ಜೈಲು ಅಧಿಕಾರಿ

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿರುವ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ....
ವಿ.ಕೆ. ಶಶಿಕಲಾ
ವಿ.ಕೆ. ಶಶಿಕಲಾ

ಚೆನ್ನೈ: ಅಕ್ರಮ ಆಸ್ತಿ  ಗಳಿಕೆ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿರುವ  ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ವಿ.ಕೆ. ಶಶಿಕಲಾ ಅವರಿಗೆ ಪ್ರತ್ಯೇಕ ಸ್ನಾನದ ಮನೆ, ವಾಟರ್ ಹೀಟರ್‌, ಹವಾನಿಯಂತ್ರಿತ ವ್ಯವಸ್ಥೆ (ಎ.ಸಿ) ಮಂಚ ಮತ್ತು ಹಾಸಿಗೆ ಸೌಲಭ್ಯ ಒದಗಿಸಿಲ್ಲ ಎಂದು ಕಾರಾಗೃಹ ಅಧಿಕಾರಿಗಳು ತಿಳಿಸಿದ್ದಾರೆ.

ಶಶಿಕಲಾ ಅವರಿಗೆ ಕೇವಲ ಟಿ.ವಿ ಸೌಲಭ್ಯ ಒದಗಿಸಲಾಗಿದೆ. ಇನ್ನುಳಿದಂತೆ ಯಾವುದೇ ಅನುಕೂಲಗಳನ್ನು ನೀಡಲಾಗಿಲ್ಲ ಎಂದು ಕೇಂದ್ರ ಕಾರಾಗೃಹದ ಡಿಐಜಿ ತಿಳಿಸಿದ್ದಾರೆ.

ಚೆನ್ನೈ ಮೂಲದ ಆರ್‌ಟಿಐ ಕಾರ್ಯಕರ್ತಎಂ.ಪಿ. ರಾಜವೇಲಾಯುಧಮ್‌ ಎಂಬುವವರು ಫೆಬ್ರವರಿ 20 ರಂದು ಸಲ್ಲಿಸಿದ್ದ  ಅರ್ಜಿಗೆ ಫೆಬ್ರವರಿ 23 ರಂದು ಉತ್ತರ ನೀಡಿದ್ದಾರೆ.  ಕರ್ನಾಟಕ ಕಾರಾಗೃಹ ನಿಯಮಗಳಂತೆ ಟಿಟಿವಿ ದಿನಕರ್ ಅವರಿಗೆ ಶಶಿಕಲಾ ಅವರನ್ನು ಭೇಟಿ ಮಾಡುವ ಅವಕಾಶ ಕಲ್ಪಿಸಲಾಗಿತ್ತು ಎಂದು ಅವರು ಹೇಳಿದ್ದಾರೆ.

ಅಕ್ರಮ ಆಸ್ತಿ ಪ್ರಕರಣದಲ್ಲಿ ಶಶಿಕಲಾ ಅವರ ಜತೆಗೆ ಸುಧಾಕರನ್ ಮತ್ತು ಇಳವರಸಿಗೆ ಸುಪ್ರೀಂಕೋರ್ಟ್‌ ಜೈಲು ಶಿಕ್ಷೆ  ವಿಧಿಸಿದೆ. ಬೆಂಗಳೂರು ಕೇಂದ್ರ ಕಾರಾಗೃಹದಿಂದ ಚೆನ್ನೈಗೆ ಸ್ಥಳಾಂತರ ಮಾಡುವ ಸಂಬಂಧ ಮೂವರು ಆರೋಪಿಗಳಿಂದ ಅಂತಹ ಯಾವುದೇ ಅರ್ಜಿ ಸಲ್ಲಿಕೆ ಯಾಗಿಲ್ಲ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com