ಈ ಕುರಿತಂತೆ ಖಾಸಗಿ ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ನಾನು ಎತ್ತಿದ ವಿಷಯ ನನ್ನ ಕೈಮೀರಿ ಹೋಗಿದೆ. ರಾಜಕೀಯಕ್ಕೆ ಪ್ರವೇಶಿಸುವ ಇಚ್ಛೆ ನನಗಿಲ್ಲ ಎಂಬುದನ್ನು ನಾನು ಮೊದಲು ಸ್ಪಷ್ಟಪಡಿಸುವೆ. ನಾನು ನನ್ನ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದೆ ಅಷ್ಟೆ. ಆದರೆ, ಈ ವಿಷಯ ಇಷ್ಟೊಂದು ದೊಡ್ಡ ತಿರುವು ಪಡೆಯುತ್ತದೆ ಎಂದು ಯೋಚಿಸಿಯೇ ಇರಲಿಲ್ಲ. ನನಗಿದು ನಿಜಕ್ಕೂ ಕೆಟ್ಟ ಸಮಯ, ಈ ಬಗ್ಗೆ ಮಾತನಾಡುವ ಪರಿಸ್ಥಿತಿಯಲ್ಲಿ ನಾನಿಲ್ಲ. ಇನ್ನು ಮುಂದೆ ಈ ವಿಷಯವನ್ನು ಮಾತನಾಡಲಾರೆ ಎಂದು ಹೇಳಿದ್ದಾರೆ.