ಪ್ರಕರಣ ಸಂಬಂಧ ಈ ಹಿಂದೆ ಪಾಕಿಸ್ತಾನ ಸರ್ಕಾರ ಭಾರತ ಸರ್ಕಾರ ಕಲೆ ಹಾಕಿರುವ 24 ಸಾಕ್ಷ್ಯಾಧಾರಗಳನ್ನು ರವಾನೆ ಮಾಡುವಂತೆ ತಿಳಿಸಿ ಪತ್ರವೊಂದನ್ನು ಕಳುಹಿಸಿತ್ತು. ಆದರೆ, ಇದಕ್ಕೆ ಉತ್ತರ ನೀಡುವ ಬದಲು ಭಾರತ ಸರ್ಕಾರ ಪ್ರಕರಣವನ್ನು ಮರು ತನಿಖೆ ನಡೆಸುವಂತೆ ಹಾಗೂ ಹಫೀಜ್, ಜಾಕಿರ್ ರೆಹ್ಮಾನ್ ಲಖ್ವಿಯನ್ನು ಮತ್ತೆ ವಿಚಾರಣೆಗೊಳಪಡಿಸುವಂತೆ ಆಗ್ರಹಿಸುತ್ತಿದೆ. ಪ್ರಕರಣದ ವಿಚಾರಣೆ ಕಳೆದ 7 ವರ್ಷಗಳಿಂದಲೂ ಪ್ರಗತಿಯಲ್ಲಿದೆಯೇ ಈ ವರೆಗೂ ತಾರ್ಕಿಕ ಹಂತಕ್ಕೆ ಬಂದಿಲ್ಲ. ಪ್ರಕರಣ ಸಂಬಂಧ ಅಂತಿಮ ನಿರ್ಧಾರ ಕೈಗೊಳ್ಳಲು ಭಾರತ ನೀಡುವ ಸಾಕ್ಷ್ಯಾಧಾರಗಳ ಅಗತ್ಯವಿದೆ ಪಾಕಿಸ್ತಾನದ ಅಧಿಕಾರಿಗಳು ಹೇಳಿಕೊಂಡಿದ್ದಾರೆ.