ಮೂಲಗಳು ತಿಳಿಸಿರುವ ಪ್ರಕಾರ, ಮಹೇಶ್ವರಿ ಹಲವು ಬಾರಿ ಪಾಕಿಸ್ತಾನಕ್ಕೆ ಹೋಗಿ ಬಂದಿದ್ದ. ಈ ವೇಳೆ ಸೇನೆಗೆ ಸಂಬಂಧಿಸಿದ ಮಾಹಿತಿಗಳನ್ನು ಪಾಕಿಸ್ತಾನ ಅಧಿಕಾರಿಗಳಿಗೆ ನೀಡುತ್ತಿದ್ದ. ವಾಯು ಪಡೆ ಹಾಗೂ ಗಡಿ ಭದ್ರತಾ ಪಡೆದ ಕಾರ್ಯಾಚರಣೆಗಳ ಕುರಿತ ಮಾಹಿತಿ, ನಕ್ಷೆಗಳನ್ನು ಅಲ್ಲಿನ ಅಧಿಕಾರಿಗಳಿಗೆ ರವಾನಿಸುತ್ತಿದ್ದ ಎಂದು ತಿಳಿದುಬಂದಿದೆ. ಪ್ರಸ್ತುತ ಮೂವರನ್ನು ಬಂಧನಕ್ಕೊಳಪಡಿಸಿರುವ ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದು, ಆರೋಪಿಗಳಿಂದ ಪಾಕಿಸ್ತಾನದ ಅಧಿಕಾರಿಗಳೊಂದಿಗೆ ಹಂಚಿಕೊಂಡಿದ್ದ ಪ್ರಮುಖ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆಂದು ತಿಳಿದುಬಂದಿದೆ.