ಇಂದು ಬೆಳಿಗ್ಗೆಯಷ್ಟೇ ಕಾಶ್ಮೀರದ ತ್ರಾಲ್ ಎಂಬ ಪ್ರದೇಶದಲ್ಲಿ ಭಾರತೀಯ ಸೇನೆ ಎನ್ ಕೌಂಟರ್ ನಡೆಸಿ, ಇಬ್ಬರು ಉಗ್ರನ್ನು ಹತ್ಯೆ ಮಾಡಿತ್ತು. ಉಗ್ರರು ಹಾಗೂ ಸೇನಾ ಪಡೆ ನಡುವೆ ನಡೆದಿದ್ದ ಗುಂಡಿನ ಚಕಮಕಿ ವೇಳೆ ಓರ್ವ ಪೊಲೀಸ್ ಪೇದೆ ಹುತಾತ್ಮರಾಗಿದ್ದರು. ಅಲ್ಲದೆ, ಓರ್ವ ಸಿಆರ್'ಪಿಎಫ್ ಯೋಧ ಗಂಭೀರವಾಗಿ ಗಾಯಗೊಂಡಿದ್ದರು. ಇದರ ಬೆನ್ನಲ್ಲೇ ಇದೀಗ ಸೇನಾ ಶಿಬಿರದಲ್ಲಿ ಸ್ಫೋಟ ಸಂಭವಿಸಿದೆ.