ಉ.ಪ್ರದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಪ್ರಜಾಪತಿಯನ್ನು ಬಂಧನಕ್ಕೊಳಪಡಿಸುತ್ತೇವೆ: ಕಲ್ರಾಜ್ ಮಿಶ್ರಾ

ಉತ್ತರಪ್ರದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದ್ದೇ ಆದರೆ, ಅತ್ಯಾಚಾರ ಪ್ರಕರಣ ಸಂಬಂಧ ತಲೆಮರೆಸಿಕೊಂಡಿರುವ ಸಮಾಜವಾದಿ ಪಕ್ಷದ ನಾಯಕ ಗಾಯತ್ರಿ ಪ್ರಜಾಪತಿಯವರನ್ನು ಬಂಧನಕ್ಕೊಳಪಡಿಸುತ್ತೇವೆಂದು...
ಕೇಂದ್ರ ಸಚಿವ ಕಲ್ರಾಜ್ ಮಿಶ್ರಾ
ಕೇಂದ್ರ ಸಚಿವ ಕಲ್ರಾಜ್ ಮಿಶ್ರಾ
ನವದೆಹಲಿ: ಉತ್ತರಪ್ರದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದ್ದೇ ಆದರೆ, ಅತ್ಯಾಚಾರ ಪ್ರಕರಣ ಸಂಬಂಧ ತಲೆಮರೆಸಿಕೊಂಡಿರುವ ಸಮಾಜವಾದಿ ಪಕ್ಷದ ನಾಯಕ ಗಾಯತ್ರಿ ಪ್ರಜಾಪತಿಯವರನ್ನು ಬಂಧನಕ್ಕೊಳಪಡಿಸುತ್ತೇವೆಂದು ಕೇಂದ್ರ ಸಚಿವ ಕಲ್ರಾಜ್ ಮಿಶ್ರಾ ಅವರು ಭಾನುವಾರ ಹೇಳಿದ್ದಾರೆ.
ಅತ್ಯಾಚಾರ ಪ್ರಕರಣದಲ್ಲಿ ಗಾಯತ್ರಿ ಪ್ರಜಾಪತಿಯವರ ಹೆಸರು ಕೇಳಿಬಂದಿದ್ದರೂ. ಈ ವರೆಗೂ ರಾಜ್ಯ ಸರ್ಕಾರ ಅವರನ್ನು ಬಂಧನಕ್ಕೊಳಪಡಿಸಿಲ್ಲ. ಮಾರ್ಚ್ 11 ರ ಬಳಿಕ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಿದ್ದೇ ಆದರೆ, ನಾವು ಪ್ರಜಾಪತಿಯನ್ನು ಬಂಧನಕ್ಕೊಳಪಡಿಸುತ್ತೇವೆಂದು ಹೇಳಿದ್ದಾರೆ. 
ಪ್ರಜಾಪತಿಯವರನ್ನು ಅಖಿಲೇಶ್ ನೇತೃತ್ವದ ಸರ್ಕಾರ ರಕ್ಷಣೆ ಮಾಡುತ್ತಿದೆ. ಹೀಗಾಗಿಯೇ ಅವರನ್ನು ಈ ವರೆಗೂ ಬಂಧನಕ್ಕೊಳಪಡಿಸಿಲ್ಲ ಎಂದು ಆರೋಪಿಸಿದ್ದಾರೆ. 
2014ರಲ್ಲಿ ಲಖನೌದಲ್ಲಿರುವ ತಮ್ಮ ನಿವಾಸಕ್ಕೆ ಮಹಿಳೆಯೊಬ್ಬರನ್ನು ಕೆರೆಸಿಕೊಂಡಿದ್ದ ಪ್ರಜಾಪತಿಯವರು, ತಮ್ಮ ಚೇಲಾಗಳೊಂದಿಗೆ ಸೇರಿಕೊಂಡು ಸಾಮೂಹಿಕವಾಗಿ ಅತ್ಯಾಚಾರ ನಡೆಸಿದ್ದರು ಎಂದು ಸಂತ್ರಸ್ತ ಮಹಿಳೆಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಳು. ಪ್ರಕರಣ ಉತ್ತರಪ್ರದೇಶದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿತ್ತು. ಆಗಿನಿಂದಲೂ ಈ ಪ್ರಕರಣ ವಿಚಾರಣೆ ಹಂತದಲ್ಲಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com