ಆರ್ ಎಸ್ಎಸ್ ಮುಖಂಡ ಚಂದ್ರಾವತ್ ಗೆ ಜೀವ ಬೆದರಿಕೆ, ಫೇಸ್ ಬುಕ್ ಖಾತೆ ಹ್ಯಾಕ್

ಆರ್ ಎಸ್ಎಸ್ ಮುಖಂಡ ಕುಂದನ್ ಚಂದ್ರಾವತ್ ತಮಗೆ ಜೀವ ಬೆದರಿಕೆ ಬರುತ್ತಿದೆ ಹಾಗೂ ಫೇಸ್ ಬುಕ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.
ಕುಂದನ್ ಚಂದ್ರಾವತ್
ಕುಂದನ್ ಚಂದ್ರಾವತ್
Updated on
ಉಜ್ಜಯಿನಿ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ತಲೆ ತೆಗೆದರೆ ಒಂದು ಕೋಟಿ ರುಪಾಯಿ ಬಹುಮಾನ ನೀಡುವುದಾಗಿ ಘೋಷಿಸಿದ್ದ ಆರ್ ಎಸ್ಎಸ್ ಮುಖಂಡ ಕುಂದನ್ ಚಂದ್ರಾವತ್ ತಮಗೆ ಜೀವ ಬೆದರಿಕೆ ಬರುತ್ತಿದೆ ಹಾಗೂ ಫೇಸ್ ಬುಕ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. 
ಸುದ್ದಿ ಸಂಸ್ಥೆ ಐಎಎನ್ಎಸ್ ನೊಂದಿಗೆ ಮಾತನಾಡಿರುವ ಚಂದ್ರಾವತ್ ಫೇಸ್ ಬುಕ್ ಮೂಲಕ ತಮಗೆ ಜೀವ ಬೆದರಿಕೆ ಬರುತ್ತಿದೆ. ಬೆದರಿಕೆ ಬಂದ ನಂತರ ಫೇಸ್ ಬುಕ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ಫೇಸ್ ಬುಕ್ ಮಾತ್ರವಲ್ಲದೇ ಮೊಬೈಲ್ ಫೋನ್ ನಿಂದಲೂ ಜೀವ ಬೆದರಿಕೆ ಕರೆಗಳು ಬರುತ್ತಿದೆ ಎಂದು ಹೇಳಿರುವ ಚಂದ್ರಾವತ್ ತಮ್ಮ ವಕೀಲರ ಸಲಹೆ ಪಡೆದು ಪ್ರಕರಣ ದಾಖಲಿಸುವುದಾಗಿ ತಿಳಿಸಿದ್ದಾರೆ. 
ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ತಲೆ ತೆಗೆದರೆ ಒಂದು ಕೋಟಿ ರುಪಾಯಿ ಬಹುಮಾನ ನೀಡುವುದಾಗಿ ಘೋಷಿಸಿದ್ದಕ್ಕಾಗಿ ಚಂದ್ರಾವತ್ ಅವರನ್ನು ಆರ್ ಎಸ್ಎಸ್ ಸಹ ಪ್ರಚಾರ ಪ್ರಮುಖ್ ಹುದ್ದೆಯಿಂದ ವಜಾಗೊಳಿಸಿತ್ತು. ಚಂದ್ರಾವತ್ ಹೇಳಿಕೆಯನ್ನಾಧರಿಸಿ ಪೊಲೀಸರು ಈಗಾಗಲೇ ಅವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com