ಮೀನುಗಾರರ ರಕ್ಷಣೆ ನಮ್ಮ ಕರ್ತವ್ಯ: ಮೋದಿಗೆ ತಮಿಳುನಾಡು ಸಿಎಂ ಪತ್ರ

ಮೀನುಗಾರರ ಜೀವ ಹಾಗೂ ಅವರ ಸ್ವಾತಂತ್ರ್ಯವನ್ನು ರಕ್ಷಣೆ ಮಾಡುವುದು ನಮ್ಮ ಕರ್ತವ್ಯ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ತಮಿಳುನಾಡು ಮುಖ್ಯಮಂತ್ರಿ ಇ.ಕೆ. ಪಳನಿಸ್ವಾಮಿ ಅವರು ಬುಧವಾರ ಪತ್ರವನ್ನು ಬರೆದಿದ್ದಾರೆ...
ತಮಿಳುನಾಡು ಮುಖ್ಯಮಂತ್ರಿ ಇ.ಕೆ. ಪಳನಿಸ್ವಾಮಿ
ತಮಿಳುನಾಡು ಮುಖ್ಯಮಂತ್ರಿ ಇ.ಕೆ. ಪಳನಿಸ್ವಾಮಿ
Updated on
ಚೆನ್ನೈ: ಮೀನುಗಾರರ ಜೀವ ಹಾಗೂ ಅವರ ಸ್ವಾತಂತ್ರ್ಯವನ್ನು ರಕ್ಷಣೆ ಮಾಡುವುದು ನಮ್ಮ ಕರ್ತವ್ಯ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ತಮಿಳುನಾಡು ಮುಖ್ಯಮಂತ್ರಿ ಇ.ಕೆ. ಪಳನಿಸ್ವಾಮಿ ಅವರು ಬುಧವಾರ ಪತ್ರವನ್ನು ಬರೆದಿದ್ದಾರೆ. 
ಭಾರತೀಯ ಮೀನುಗಾರರು ಮೀನುಗಾರನನ್ನು ಶ್ರೀಲಂಕಾ ನೌಕಾಪಡೆ ಹತ್ಯೆ ಮಾಡಿರುವುದನ್ನು ಖಂಡಿಸಿ ಪ್ರಧಾನಿ ಮೋದಿಯವರಿಗೆ ತಮಿಳುನಾಡು ಮುಖ್ಯಮಂತ್ರಿ ಪತ್ರವನ್ನು ಬರೆದಿದ್ದಾರೆ. ಮೀನುಗಾರನ ಹತ್ಯೆ ಪ್ರಕರಣವನ್ನು ಕಡೆಗಣಿಸಬಾರದು. ಇಂತಹ ಕೃತ್ಯಗಳನ್ನು ಯಾವುದೇ ಕಾರಣಕ್ಕೂ ಸಹಿಸಿಕೊಳ್ಳಬಾರದು ಎಂದು ಪಳನಿಸ್ವಾಮಿಯವರು ಪತ್ರದಲ್ಲಿ ಹೇಳಿದ್ದಾರೆ. 
ಶ್ರೀಲಂಕಾ ನೌಕಾಪಡೆಯ ಅಮಾನವೀಯ ಮತ್ತು ಅನಾಗರೀಕ ತಂತ್ರಗಳು ಭಾರತ ಮತ್ತು ಶ್ರೀಲಂಕಾ ಸರ್ಕಾರಗಳ ರಾಜತಾಂತ್ರಿಕ ಸಭೆಗಳನ್ನು ನಿರರ್ಥಕಗೊಳಿಸುತ್ತದೆ. ಮೀನುಗಾರರ ಜೀವ ಮತ್ತು ಅವರ ಸ್ವಾತಂತ್ರ್ಯವನ್ನು ರಕ್ಷಣೆ ಮಾಡುವುದು ಭಾರತ ಮತ್ತು ತಮಿಳುನಾಡು ಸರ್ಕಾರ ಕರ್ತವ್ಯವಾಗಿದೆ ಎಂದು ತಿಳಿಸಿದ್ದಾರೆ. 
ಪಾಕಿಸ್ತಾನದ ಜನಸಂಧಿ ಸಮೀಪ ಭಾರತೀಯ ಮೀನುಗಾರರು ಮೀನುಗಾರಿಕೆ ಮಾಡುತ್ತಿದ್ದ ಸಂದರ್ಭದಲ್ಲಿ ಶ್ರೀಲಂಕಾ ನೌಕಾಪಡೆ ಮೀನುಗಾರರ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿತ್ತು. ಈ ವೇಳೆ ಓರ್ವ ಮೀನುಗಾರ ಸ್ಥಳದಲ್ಲಿಯೇ ಮೃತಪಟ್ಟಿದ್ದ. ಶ್ರೀಲಂಕಾ ನೌಕಾಪಡೆಯ ಈ ದೌರ್ಜನ್ಯಕ್ಕೆ ತೀವ್ರ ಆಕ್ರೋಶಗಳು ವ್ಯಕ್ತವಾಗತೊಡಗಿವೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com