ಐಎಸ್ಐಎಸ್ ಪ್ರೇರಿತ ಉಗ್ರರಿಂದ ಉಜ್ಜನಿ ರೈಲು ಸ್ಫೋಟ: ಮಧ್ಯಪ್ರದೇಶ ಸಿಎಂ

ಭೋಪಾಲ್ - ಉಜ್ಜೈನ್ ರೈಲಿನಲ್ಲಿ ಬಾಂಬ್ ಸ್ಫೋಟಿಸಿದ ಉಗ್ರರು ಐಎಸ್ಐಎಸ್ ತತ್ವ ಸಿದ್ಧಾಂತಗಳಿಂದ ಪ್ರೆರೇಪಿತರಾಗಿದ್ದಾರೆ....
ಭೋಪಾಲ್ - ಉಜ್ಜೈನ್ ರೈಲು
ಭೋಪಾಲ್ - ಉಜ್ಜೈನ್ ರೈಲು
Updated on
ಭೋಪಾಲ್: ಭೋಪಾಲ್ - ಉಜ್ಜನಿ ರೈಲಿನಲ್ಲಿ ಬಾಂಬ್ ಸ್ಫೋಟಿಸಿದ ಉಗ್ರರು ಐಎಸ್ಐಎಸ್ ತತ್ವ ಸಿದ್ಧಾಂತಗಳಿಂದ ಪ್ರೆರೇಪಿತರಾಗಿದ್ದಾರೆ ಮತ್ತು ಇದೊಂದು 'ಪ್ರಾಯೋಗಿಕ ಸ್ಫೋಟ' ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ ಅವರು ಬುಧವಾರ ಹೇಳಿದ್ದಾರೆ.
ರೈಲು ಸ್ಫೋಟಕ್ಕೆ ಸಂಬಂಧಿಸಿದಂತೆ ಇಂದು ವಿಧಾನಸಭೆಗೆ ಉತ್ತರ ನೀಡಿದ ಮಧ್ಯಪ್ರದೇಶ ಸಿಎಂ, ಲಖನೌನಿಂದ ಆಗಮಿಸಿದ ದುಷ್ಕರ್ಮಿಗಳು ನಿನ್ನೆ ರೈಲಿನಲ್ಲಿ ಬಾಂಬ್ ಸ್ಫೋಟಿಸಿದ್ದು, ಇದೊಂದು ಪೂರ್ವ ನಿಯೋಜಿತ ಕೃತ್ಯ ಎಂದಿದ್ದಾರೆ.
ರೈಲಿನಲ್ಲಿ ಬಾಂಬ್ ಸ್ಫೋಟಿಸಿದ ಉಗ್ರರು ಐಎಸ್ಐಎಸ್ ಉಗ್ರ ಸಂಘಟನೆಯಿಂದ ಪ್ರೆರೇಪಿತರಾಗಿದ್ದು, ಮತ್ತಷ್ಟು ದಾಳಿ ನಡೆಸಲು ಸಂಚು ರೂಪಿಸಿದ್ದರು ಎಂದು ಬಜೆಟ್ ಅಧಿವೇಶನದಲ್ಲಿ ಸಿಎಂ ತಿಳಿಸಿದ್ದಾರೆ.
ನಿನ್ನೆ ಮಧ್ಯಪ್ರದೇಶದ ಶಜಾಪುರ್ ಜಿಲ್ಲೆಯ ಜಬ್ಡಿ ನಿಲ್ದಾಣದ ಬಳಿ ಉಗ್ರರು ಐಇಡಿ ಬಳಿಸಿ ಭೋಪಾಲ್ - ಉಜ್ಜನಿ ರೈಲಿನಲ್ಲಿ ಬಾಂಬ್ ಸ್ಫೋಟಿಸಿದ್ದರು. ಘಟನೆಯಲ್ಲಿ 10 ಮಂದಿ ಗಾಯಗೊಂಡಿದ್ದು, ಆ ಪೈಕಿ ಮೂವರ ಸ್ಥಿತಿ ಗಂಭೀರವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com