ಜಕಾರ್ತದಿಂದ ಭಾರತಕ್ಕೆ ಹಿಂದಿರುವ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಮೀನುಗಾರನ ಹತ್ಯೆ ಕುರಿತಂತೆ ಇಂದು ಬೆಳಿಗ್ಗೆಯಷ್ಟೇ ನನಗೆ ಸುದ್ದಿ ತಿಳಿದಿತ್ತು. ಹತ್ಯೆ ಸಂಬಂಧ ಶ್ರೀಲಂಕಾ ನೌಕಾಪಡೆಯ ಮುಖ್ಯಸ್ಥರೊಂದಿಗೆ ಮಾತುಕತೆ ನಡೆಸಿದಾಗ, ಅಂತಹ ಯಾವುದೇ ಘಟನೆಗಳು ನಮ್ಮ ಕಡೆಯಿಂದ ನಡೆದಿಲ್ಲ ಎಂದು ಹೇಳಿದರು. ನಂತರ ಶ್ರೀಲಂಕಾ ಅಧ್ಯಕ್ಷರೊಂದಿಗೆ ಈ ಬಗ್ಗೆ ಮಾತುಕತೆ ನಡೆಸಿದೆ. ಈ ವೇಳೆ ಸಿರಿಸೇನಾ ಅವರು ಪ್ರಕರಣ ಸಂಬಂಧ ಸಂಪೂರ್ಣ ತನಿಖೆ ನಡೆಸುವುದಾಗಿ ಹೇಳಿದ್ದಾರೆಂದು ಹೇಳಿದ್ದಾರೆ.