ಫೆ.27 ರಂದು ನಡೆದಿದ್ದ ಪ್ರತಿಭಟನೆ ಬಳಿಕ ಉಪ ಕುಲಪತಿಗಳ ಕಚೇರಿ ಬಳಿ ಬಂದ ವಿದ್ಯಾರ್ಥಿಗಳು ಉಪ ಕುಲಪತಿಗಳನ್ನು ಭೇಟಿ ಮಾಡಬೇಕೆಂದು ಆಗ್ರಹಿಸಿದ್ದಾರೆ. ಉಪ ಕುಲಪತಿಗಳ ಆರೋಗ್ಯ ಸರಿಯಲ್ಲದ ಕಾರಣ ಭೇಟಿಗೆ ನಿರಾಕರಿಸಲಾಗಿದೆ. ಉಪ ಕುಲಪತಿಗಳು ಅನಾರೋಗ್ಯ ಪೀಡಿತರಾಗಿದ್ದರಿಂದ ವೈದ್ಯರನ್ನು ಕರೆಸಲಾಗಿದೆ. ಆದರೆ, ಈ ವೇಳೆ ವಿದ್ಯಾರ್ಥಿಗಳು ವೈದ್ಯರು ಒಳಹೋಗದಂತೆ ತಡೆಹಿಡಿದ್ದಾರೆ. ಉಪ ಕುಲಪತಿಗಳು ಭೇಟಿ ಮಾಡಲಿಲ್ಲವೆಂದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಿದ್ಯಾರ್ಥಿನಿಯೊಬ್ಬಳು ಬೆದರಿಕೆ ಹಾಕಿದ್ದಾಳೆ. ಅಲ್ಲದೆ, ಕೆಲ ವಿದ್ಯಾರ್ಥಿಗಳು ಉಪಕುಲಪತಿಗಳೊಂದಿಗೆ ಕೆಟ್ಟದಾಗಿ ವರ್ತಿಸಿದ್ದಾರೆಂದು ದೂರಿನಲ್ಲಿ ಹೇಳಿಕೊಳ್ಲಲಾಗಿದೆ.