ಪುಲ್ವಾಮ ಎನ್'ಕೌಂಟರ್: ಭದ್ರತಾ ಪಡೆ, ಸ್ಥಳೀಯರ ನಡುವೆ ಘರ್ಷಣೆ, ಓರ್ವ ನಾಗರೀಕ ಸಾವು

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ಉಗ್ರರಿಗಾಗಿ ನಡೆಸಲಾಗುತ್ತಿದ್ದ ಎನ್ ಕೌಂಟರ್ ವೇಳೆ ಭದ್ರತಾ ಪಡೆಗಳು ಹಾಗೂ ಸ್ಥಳೀಯರ ನಡುವೆ ಘರ್ಷಣೆ ಏರ್ಪಟ್ಟಿದ್ದು, ಘಟನೆಯಲ್ಲಿ ಓರ್ವ ನಾಗರೀಕ ಸಾವನ್ನಪ್ಪಿರುವುದಾಗಿ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on
ಪುಲ್ವಾಮ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ಉಗ್ರರಿಗಾಗಿ ನಡೆಸಲಾಗುತ್ತಿದ್ದ ಎನ್ ಕೌಂಟರ್ ವೇಳೆ ಭದ್ರತಾ ಪಡೆಗಳು ಹಾಗೂ ಸ್ಥಳೀಯರ ನಡುವೆ ಘರ್ಷಣೆ ಏರ್ಪಟ್ಟಿದ್ದು, ಘಟನೆಯಲ್ಲಿ ಓರ್ವ ನಾಗರೀಕ ಸಾವನ್ನಪ್ಪಿರುವುದಾಗಿ ಗುರುವಾರ ಮೂಲಗಳಿಂದ ತಿಳಿದುಬಂದಿದೆ. 
ಪುಲ್ವಾಮ ಜಿಲ್ಲೆಯ ಪದಗಂಪೋರ ಗ್ರಾಮದಲ್ಲಿ 4-5 ಉಗ್ರರು ಅಡಗಿ ಕುಳಿತಿದ್ದರು. ಈ ಹಿನ್ನಲೆಯಲ್ಲಿ ಸೇನಾಪಡೆ ಕಳೆದ ರಾತ್ರಿಯಿಂದಲೂ ಕಾರ್ಯಾಚರಣೆ ನಡೆಸುತ್ತಿದೆ. ಇಂದು ಬೆಳಿಗ್ಗೆ ಕೂಡ ಕಾರ್ಯಾಚರಣೆ ನಡೆಸಲಾಗಿದ್ದು, ಇಬ್ಬರು ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಗೆ ಸೇರಿದ ಉಗ್ರರನ್ನು ಹತ್ಯೆ ಮಾಡಿದೆ. ಇಬ್ಬರು ಉಗ್ರರನ್ನು ಜಹಾಂಗೀರ್ ಗೈನ್, ಶಫಿ ಶೆರ್ಗೊಜಿರಿ ಎಂದು ಗುರ್ತಿಸಲಾಗಿದೆ. 
ಸೇನಾ ಪಡೆ ಕಾರ್ಯಾಚರಣೆ ವೇಳೆ ಕೆಲ ಸ್ಥಳೀಯರು ಇದಕ್ಕೆ ಅಡ್ಡಿಪಡಿಸಲು ಮುಂದಾಗಿದ್ದು, ಈ ವೇಳೆ ಸೇನಾ ಪಡೆ ಹಾಗೂ ನಾಗರೀಕರ ನಡುವೆ ಘರ್ಷಣೆ ಏರ್ಪಟ್ಟಿದೆ. ಆ ವೇಳೆ ಪೊಲೀಸರು ನಡೆಸಿದ್ದ ಗುಂಡಿನ ದಾಳಿಯಲ್ಲಿ 15 ವರ್ಷದ ಶಾಲಾ ಬಾಲಕನೊಬ್ಬ ಮೃತಪಟ್ಟಿದ್ದಾನೆಂದು ತಿಳಿದುಬಂದಿದೆ. ಅಲ್ಲದೆ. ಇಬ್ಬರು ನಾಗರೀಕರಿಗೂ ಗಾಯವಾಗಿರುವುದಾಗಿ ವರದಿಗಳು ತಿಳಿಸಿವೆ. ಪ್ರಸ್ತುತ ಸ್ಥಳದಲ್ಲಿ ಉಗ್ರರು ಇನ್ನೂ ಅಡಗಿ ಕುಳಿತಿರುವ ಶಂಕೆಗಳು ವ್ಯಕ್ತವಾಗಿದ್ದು, ಕಾರ್ಯಾಚರಣೆ ಮುಂದುವರೆದಿದೆ ಎಂದು ಹೇಳಲಾಗುತ್ತಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com