ಇದೇ ಕಾರ್ಯಕ್ರಮದಲ್ಲಿ ಮತ್ತೊಂದು ಘಟನೆ ಕೂಡ ನಡೆದಿದೆ. ಉತ್ತರಪ್ರದೇಶದ ಪಂಚಾಯತೊಂದರ ಅಧ್ಯಕ್ಷೆ ಪ್ರಧಾನಿ ಮೋದಿಯವರಿಗೆ ಮನವಿ ಪತ್ರವನ್ನು ಸಲ್ಲಿಸಲು ಬಂದಿದ್ದರು, ಉತ್ತರಪ್ರದೇಶ ರಾಜ್ಯದಲ್ಲಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ನೇತೃತ್ವದ ಸರ್ಕಾರ ತಮ್ಮ ಗ್ರಾಮವನ್ನು ನಿರ್ಲಕ್ಷಿಸುತ್ತಿದ್ದು, ಈ ಬಗ್ಗೆ ಕ್ರಮಕೈಗೊಳ್ಳುವಂತೆ ಕೋರಿ ಮಹಿಳೆ ಮನವಿ ಪತ್ರ ಸಲ್ಲಿಸಲು ಕಾರ್ಯಕ್ರಮಕ್ಕೆ ಬಂದಿದ್ದರು.