ಪಂಚ ರಾಜ್ಯ ಚುನಾವಣೆಯ ಫಲಿತಾಂಶ ರಾಜ್ಯದ ಉಪಚುನಾವಣೆ, ಚುನಾವಣೆಗೆ ದಿಕ್ಸೂಚಿ: ಯಡ್ಯೂರಪ್ಪ

ಚುನಾವಣೆಯ ಫಲಿತಾಂಶ ರಾಜ್ಯದ ಉಪಚುನಾವಣೆ ಹಾಗೂ 2018 ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದು ಯಡ್ಯೂರಪ್ಪ ಅಭಿಪ್ರಾಯಪಟ್ಟಿದ್ದಾರೆ.
ಬಿಎಸ್ ಯಡ್ಯೂರಪ್ಪ
ಬಿಎಸ್ ಯಡ್ಯೂರಪ್ಪ
Updated on
ಬೆಂಗಳೂರು: ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ಫಲಿತಾಂಶದ ಬಗ್ಗೆ ರಾಜ್ಯ ಬಿಜೆಪಿ ಅಧ್ಯಕ್ಷ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡ್ಯೂರಪ್ಪ ಪ್ರತಿಕ್ರಿಯೆ ನೀಡಿದ್ದು, ಚುನಾವಣೆಯ ಫಲಿತಾಂಶ ರಾಜ್ಯದ ಉಪಚುನಾವಣೆ ಹಾಗೂ 2018 ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. 
ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಮಂತ್ರದಿಂದ ಈ ಫಲಿತಾಂಶ ದೊರೆತಿದ್ದು, ಉತ್ತರ ಪ್ರದೇಶ ಮಾದರಿಯ ಫಲಿತಾಂಶವೂ ರಾಜ್ಯದಲ್ಲಿ ಬರಲಿದ್ದು, ದೇಶಾದ್ಯಂತ ಬಿಜೆಪಿ, ಮೋದಿ ಪರ ಅಲೆ ಎದ್ದಿದೆ ಎಂದು ಯಡ್ಯೂರಪ್ಪ ಹೇಳಿದ್ದಾರೆ. ಹಗುರವಾಗಿ ಮಾತನಾಡುತ್ತಿದ್ದವರಿಗೆ ಜನತೆ ತಕ್ಕ ಉತ್ತರ ನೀಡಿದ್ದಾರೆ. ಪಂಚ ರಾಜ್ಯಗಳ ಚುನಾವಣೆಯ ಫಲಿತಾಂಶದ ಕೀರ್ತಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲ್ಲಬೇಕು, ಚುನಾವಣೆಯ ಫಲಿತಾಂಶ ಮುಂಬರುವ ನಂಜನಗೂಡು, ಗುಂಡ್ಲುಪೇಟೆ ಉಪಚುನಾವಣೆಯ ಮೇಲೂ ಪರಿಣಾಮ ಬೀರಲಿದ್ದು, ವಿಧಾನಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದು ಯಡ್ಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com