ಪಂಜಾಬ್ ನಲ್ಲಿ ಗೆದ್ದ ಕಾಂಗ್ರೆಸ್ ನಾಯಕ ಅಮರಿಂದರ್ ಸಿಂಗ್ ಗೆ ಪ್ರಧಾನಿ ಶುಭಾಶಯ

ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಅಮರಿಂದರ್ ಸಿಂಗ್ ಅವರ ಜನ್ಮದಿನದಂದೇ ಫಲಿತಾಂಶ ಪ್ರಕಟವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಶುಭ ಹಾರೈಸಿದ್ದಾರೆ.
ನರೇಂದ್ರ ಮೋದಿ
ನರೇಂದ್ರ ಮೋದಿ
ನವದೆಹಲಿ: ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಪಂಜಾಬ್ ನಲ್ಲಿ ಕಾಂಗ್ರೆಸ್ ಪಕ್ಷ ಸರ್ಕಾರ ರಚಿಸಲು ಬಹುಮತ ಗಳಿಸಿದೆ. ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಅಮರಿಂದರ್ ಸಿಂಗ್ ಅವರ ಜನ್ಮದಿನದಂದೇ ಫಲಿತಾಂಶ ಪ್ರಕಟವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಶುಭ ಹಾರೈಸಿದ್ದಾರೆ. 
ಪಂಜಾಬ್ ನಲ್ಲಿ ಕಾಂಗ್ರೆಸ್ ಹಾಗೂ ಅಮರಿಂದರ್ ಸಿಂಗ್ ಅವರ ಗೆಲುವಿನ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಜನ್ಮ ದಿನದಂದೇ ಗೆಲುವು ಘೋಷಣೆಯಾಗಿದ್ದು ಅಮರಿಂದರ್ ಸಿಂಗ್ ಅವರೊಂದಿಗೆ ಮಾತನಾಡಿ ಜನ್ಮದಿನದ ಶುಭಾಶಯಗಳೊಂದಿಗೆ ಗೆಲುವಿಗೂ ಅಭಿನಂದನೆ ಸಲ್ಲಿಸಿದ್ದೇನೆ. ಅಮರಿಂದರ್ ಸಿಂಗ್ ಅವರ ದೀರ್ಘಾಯುಷ್ಯ, ಆರೋಗ್ಯಕ್ಕಾಗಿ ಪ್ರಾರ್ಥಿಸಿದ್ದೇನೆ ಎಂದು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com