ನಾವು ಜನರ ತೀರ್ಪು ಒಪ್ಪಿಕೊಳ್ಳುತ್ತೇವೆ: ಅರವಿಂದ್ ಕೇಜ್ರಿವಾಲ್

ನಾವು ಜನರ ತೀರ್ಪು ಒಪ್ಪಿಕೊಳ್ಳುತ್ತೇವೆ ಮತ್ತು ನಮ್ಮ ಹೋರಾಟ ಮುಂದುವರೆಯಲಿದೆ ಎಂದು ಪಂಜಾಬ್ ಮತ್ತು....
ಅರವಿಂದ್ ಕೇಜ್ರಿವಾಲ್
ಅರವಿಂದ್ ಕೇಜ್ರಿವಾಲ್
ನವದೆಹಲಿ: ನಾವು ಜನರ ತೀರ್ಪು ಒಪ್ಪಿಕೊಳ್ಳುತ್ತೇವೆ ಮತ್ತು ನಮ್ಮ ಹೋರಾಟ ಮುಂದುವರೆಯಲಿದೆ ಎಂದು ಪಂಜಾಬ್ ಮತ್ತು ಗೋವಾದಲ್ಲಿ ಉತ್ತಮ ಸಾಧನೆ ಮಾಡುವಲ್ಲಿ ವಿಫಲವಾಗಿರುವ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಶನಿವಾರ ಹೇಳಿದ್ದಾರೆ.
ಪಂಚರಾಜ್ಯಗಳ ಚುನಾವಣೆ ಫಲಿತಾಂಶ ಹೊರಬಿದ್ದ ನಂತರ ಟ್ವೀಟ್ ಮಾಡಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು, ನಮ್ಮ ಪಕ್ಷದ ಎಲ್ಲಾ ಕಾರ್ಯಕರ್ತರು ಕಠಿಣ ಶ್ರಮವಹಿಸಿ ಕೆಲಸ ಮಾಡಿದ್ದಾರೆ. ನಮ್ಮ ಹೋರಾಟ ಮುಂದುವರೆಯಲಿದೆ ಎಂದಿದ್ದಾರೆ.
ಪಂಜಾಬ್ ಮತ್ತು ಗೋವಾದಲ್ಲಿ ಗೆಲುವು ಸಾಧಿಸುವುದಕ್ಕಾಗಿ ಆಮ್ ಆದ್ಮಿ ಪಕ್ಷ ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡಿತ್ತು. ಸ್ವತಃ ಅರವಿಂದ್ ಕೇಜ್ರಿವಾಲ್ ಅವರು ಪಂಜಾಬ್ ನಲ್ಲಿ ಸುಮಾರು 95 ರ್ಯಾಲಿಗಳನ್ನು ಮಾಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com