ಪಾಟ್ನಾ: ಉತ್ತರ ಪ್ರದೇಶ ಹಾಗೂ ಉತ್ತರಾಖಂಡ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿಗೆ ಬಿಹಾರ ಮುಖ್ಯಮಂತ್ರಿ ನಿತಿಶ್ ಕುಮಾರ್ ಅವರು ಭಾನುವಾರ ಅಭಿನಂದನೆ ಸಲ್ಲಿಸಿದ್ದಾರೆ.
ಈ ಹಿಂದೆ ಪ್ರಧಾನಿ ನರೇಂದ್ರ ಮೋದಿಯ ನೋಟ್ ನಿಷೇಧ ನಿರ್ಧಾರ ಬೆಂಬಲಿಸಿದ್ದ ನಿತಿಶ್ ಕುಮಾರ್ ಅವರು, ಪ್ರತಿಪಕ್ಷಗಳು ನೋಟ್ ನಿಷೇಧಕ್ಕೆ ಸಿಕ್ಕ ಜನ ಬೆಂಬಲವನ್ನು ಕಡೆಗಣಿಸಿದವು ಎಂದು ಟ್ವೀಟ್ ಮಾಡಿದ್ದಾರೆ.
ನೋಟ್ ನಿಷೇಧದ ಬಗ್ಗೆ ಬಡವರಿಗೆ ಸಂಪೂರ್ಣ ತೃಪ್ತಿ ಇದೆ. ಹೀಗಾಗಿ ಪ್ರತಿಪಕ್ಷಗಳು ಅದನ್ನು ವಿರೋಧಿಸಬಾರದಿತ್ತು ಎಂದು ಹೇಳಿದ್ದಾರೆ.
ಆರಂಭದಲ್ಲಿ ಕೇಂದ್ರ ಸರ್ಕಾರದ ನೋಟ್ ನಿಷೇಧ ನಿರ್ಧಾರ ಬೆಂಬಲಿಸಿದ್ದ ಬಿಹಾರ ಸಿಎಂ, ನಂತರ ಅದನ್ನು ಸಮರ್ಪಕವಾಗಿ ಜಾರಿಗೆ ತರುವಲ್ಲಿ ಮೋದಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದ್ದರು.