ನಿರ್ಮಲಾ ಸೀತಾರಾಮನ್ ಪ್ರಯತ್ನಕ್ಕೆ ಫಲ: ಪ್ರತಿಭಟನೆ ಹಿಂಪಡೆದ ತ.ನಾಡು ಮೀನುಗಾರರು

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಪೊನ್ ರಾಧಾಕೃಷ್ಣನ್ ಅವರೊಂದಿಗಿನ ಮಾತುಕತೆ ಬಳಿಕ ತಮಿಳುನಾಡು ಮೀನುಗಾರರು ತಮ್ಮ ಪ್ರತಿಭಟನೆಯನ್ನು ಸೋಮವಾರ ಹಿಂಪಡೆದಿದ್ದಾರೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on
ರಾಮೇಶ್ವರಂ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಪೊನ್ ರಾಧಾಕೃಷ್ಣನ್ ಅವರೊಂದಿಗಿನ ಮಾತುಕತೆ ಬಳಿಕ ತಮಿಳುನಾಡು ಮೀನುಗಾರರು ತಮ್ಮ ಪ್ರತಿಭಟನೆಯನ್ನು ಸೋಮವಾರ ಹಿಂಪಡೆದಿದ್ದಾರೆ. 
ಈ ಹಿಂದೆ ತಮಿಳುನಾಡು ಮೀನುಗಾರನೊಬ್ಬನನ್ನು ಶ್ರೀಲಂಕಾ ನೌಕಾಪಡೆ ಗುಂಡಿಟ್ಟು ಹತ್ಯೆ ಮಾಡಿತ್ತು. ಇದಕ್ಕೆ ತಮಿಳುನಾಡು ಮೀನುಗಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೆ. ಕಳೆದ 6 ದಿನಗಳಿಂದಲೂ ಸುಧೀರ್ಘವಾಗಿ ಪ್ರತಿಭಟನೆ ನಡೆಸುತ್ತಿದ್ದರು. 
ಈ ಹಿನ್ನಲೆಯಲ್ಲಿ ಪ್ರಧಾನಮಂತ್ರಿಯವರ ಪರವಾಗಿ ನಿರ್ಮಲಾ ಸೀತಾರಾಮನ್ ಅವರು ಮೀನುಗಾರರ ಮನವೊಲಿಸಲು ಮಾತುಕತೆ ನಡೆಸಿದ್ದರು. ರಾಜತಾಂತ್ರಿಕತೆಯ ಮೂಲಕ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದರು. ಈ ಹಿನ್ನಲೆಯಲ್ಲಿ ಇದೀಗ ಮೀನುಗಾರರು ತಮ್ಮ ಪ್ರತಿಭಟನೆಯನ್ನು ಹಿಂಪಡೆಯಲು ತೀರ್ಮಾನಿಸಿದ್ದಾರೆಂದು ತಿಳಿದುಬಂದಿದೆ.
ಸಚಿವರೊಂದಿಗಿನ ಮಾತುಕತೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿರುವ ಮೀನುಗಾರರು, ಹತ್ಯೆಯಾದ ಮೀನುಗಾರನ ಅಂತ್ಯ ಸಂಸ್ಕಾರವನ್ನು ನಾಳೆ ನಡೆಸಲಾಗುತ್ತದೆ. ಪ್ರಸ್ತುತ ನಮ್ಮ ಪ್ರತಿಭಟನೆಯನ್ನು ಹಿಂಪಡೆಯುತ್ತಿದ್ದೇವೆಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com