ಸ್ಥಳೀಯ ನಾಯಕರನ್ನು ಮುಂದೆ ಬರಲು ಬಿಡುವುದಿಲ್ಲ ಮತ್ತು ಪಕ್ಷದ ಹಿರಿಯ ನಾಯಕರು ಅವರೊಂದಿಗೆ ಸಂಪರ್ಕ ಹೊಂದಿಲ್ಲ ಎಂದು ಕಾಂಗ್ರೆಸ್ ನಾಯಕತ್ವದ ಬಗ್ಗೆ ಕೇಳಿಬರುತ್ತಿರುವ ಆರೋಪಗಳನ್ನು ತಳ್ಳಿ ಹಾಕಿದ ರಾಹುಲ್ ಗಾಂಧಿ, ನಾವು ಪಂಜಾಬ್ ನಲ್ಲಿ ಸರ್ಕಾರ ರಚಿಸಿದ್ದೇವೆ. ಮಣಿಪುರ ಮತ್ತು ಗೋವಾಗಳಲ್ಲಿ ಕೂಡ ನಾವು ಚುನಾವಣೆಯನ್ನು ಗೆದ್ದುಕೊಂಡಿದ್ದೇವೆ. ಹೀಗಿರುವಾಗ ನಮ್ಮ ಪಾಲಿಗೆ ಫಲಿತಾಂಶವೇನು ಕೆಟ್ಟದಾಗಿಲ್ಲ ಎಂದರು.