ನವದೆಹಲಿ: ಇತ್ತೀಚಿನ ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಕಳಪೆ ಪ್ರದರ್ಶನಕ್ಕೆ ಎಲೆಕ್ಟ್ರಾನಿಕ್ ಮತಯಂತ್ರದ ದೋಷ ಕಾರಣ ಎಂದು ಆರೋಪ ಮಾಡಿರುವ ಅರವಿಂದ್ ಕೇಜ್ರಿವಾಲ್ ಹೇಳಿಕೆಗೆ ಪ್ರತಿಕ್ರಿಯಿಸಿದ ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸಚಿವೆ ಹರ್ಸಿಮ್ರತ್ ಕೌರ್ ಬಾದಲ್, ಕೇಜ್ರಿವಾಲ್ ಅವರು ಮಾನಸಿಕ ಸ್ಥಿರತೆ ಕಳೆದುಕೊಂಡಿದ್ದಾರೆ ಎಂದು ಹೇಳಿದರು.