ರಾಜೀನಾಮೆ ನೀಡುವುದರ ಬಗ್ಗೆ ರಾಜ್ ಬಬ್ಬರ್ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದು, ಉತ್ತರ ಪ್ರದೇಶದಲ್ಲಿ ಉಂಟಾದ ಸೋಲಿಗೆ ನಾನೇ ಹೊಣೆ ಹೊರುತ್ತೇನೆ ಎಂದು ಹೇಳಿದ್ದಾರೆ. ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಶ್ರಮ ವಹಿಸಿದರೂ, ನಿರೀಕ್ಷೆಗೆ ತಕ್ಕಂತೆ ಕಾಂಗ್ರೆಸ್ ಕೆಲಸ ಮಾಡಲಿಲ್ಲ ಎಂದು ರಾಜ್ ಬಬ್ಬರ್ ಹೇಳಿದ್ದಾರೆ. ಇದೇ ವೇಳೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿರುವ ರಾಜ್ ಬಬ್ಬರ್ ಬಿಜೆಪಿ ಹಣ ಮತ್ತು ತೋಳ್ಬಲದಿಂದ ಗೋವಾ ಹಾಗೂ ಮಣಿಪುರದಲ್ಲಿ ಅಧಿಕಾರ ಹಿಡಿದಿದೆ ಎಂದು ಆರೋಪಿಸಿದ್ದಾರೆ.