ಇದೇ ವೇಳೆ ಮಾತನಾಡಿದ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ "ಸದನಕ್ಕೆ ಸ್ವಾಗತಿಸುತ್ತೇವೆ. ದೇಶಕ್ಕೆ ಮತ್ತಷ್ಟು ಸೇವೆ ಮಾಡುತ್ತೀರಿ ಎಂಬ ನಂಬಿಕೆ ಇದೆ" ಎಂದಿದ್ದಾರೆ. ಸುಷ್ಮಾ ಸ್ವರಾಜ್ ಆಸೀನರಾದ ಬೆನ್ನಲ್ಲೇ ಕಾಂಗ್ರೆಸ್ ಸಂಸದ ಜೋತಿರಾದಿತ್ಯ ಸಿಂಧಿಯಾ, ಕೇಂದ್ರ ಸಚಿವ ಸದಾನಂದ ಗೌಡ ಆರೋಗ್ಯ ವಿಚಾರಿಸಿದರು. ಸದಸ್ಯರ ಸ್ವಾಗತಕ್ಕೆ ಪ್ರತಿಕ್ರಿಯೆ ನೀಡಿದ ಸುಷ್ಮಾ ಸ್ವರಾಜ್ "ನಿಮ್ಮ ಹಾರೈಕೆಗೆ ಧನ್ಯವಾದಗಳು, ಎಲ್ಲಕ್ಕಿಂತ ಹೆಚ್ಚಾಗಿ ಭಗವಾನ್ ಕೃಷ್ಣನ ಕೃಪೆಯಿಂದ ಸದನದಲ್ಲಿ ಮತ್ತೆ ಹಾಜರಾಗಿದ್ದೇನೆ" ಎಂದು ಹೇಳಿದ್ದಾರೆ.