ಝಾಕಿರ್ ನಾಯಕ್ ನೇತೃತ್ವದ ಎನ್ ಜಿಒದಲ್ಲಿ ಸರಣಿ ಅಕ್ರಮಗಳು ನಡೆಯುತ್ತಿರುವುದನ್ನು ಹಲವು ತನಿಖಾ ಸಂಸ್ಥೆಗಳು ಪತ್ತೆ ಹಚ್ಚಿದ ಬಳಿಕ ಈ ಕೇಂದ್ರ ಸರ್ಕಾರ ಈ ಕ್ರಮಕ್ಕೆ ಮುಂದಾಗಿತ್ತು. ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿದೆ ಎಂಬ ಆರೋಪವಿರುವ ಪೀಸ್ ಟಿ.ವಿ ಜೆತೆ ಝಾಕೀರ್ ಸಂಸ್ಥೆ ನಂಟು ಹೊಂದಿದೆ ಎಂಬ ಆರೋಪಗಳೂ ಕೇಳಿಬಂದಿತ್ತು. ಇದಲ್ಲದೆ, ಝಾಕಿರ್ ನಾಯ್ಕ್ ಅವರ ಬೋಧನೆಯಿಂದ ಪ್ರೇರಿತರಾಗಿದ್ದೇವೆಂದು ಕೆಲ ಭಯೋತ್ಪಾದಕರೂ ಕೂಡ ಹೇಳಿಕೊಂಡಿದ್ದರು. ನಂತರ ಝಾಕೀರ್ ಪ್ರಚೋದನಾಕಾರಿ ಭಾಷಣಗಳ ಮೇಲೆ ಅಧಿಕಾರಿಗಳು ನಿಗಾ ಇಟ್ಟಿದ್ದರು.