ಕಳೆದ ಬುಧವಾರ ಲಾಹೋರ್ ನಿಂದ ಕರಾಚಿಗೆ ಇಬ್ಬರು ಧರ್ಮಗುರುಗಳು ವಿಮಾನ ಹಿಡಿಯಬೇಕಾಗಿತ್ತು. ಆಸೀಫ್ ಗೆ ಕರಾಚಿಗೆ ತೆರಳಲು ಅನುಮತಿ ನೀಡಲಾಗಿತ್ತು. ಆದರೆ, ಪ್ರಯಾಣ ದಾಖಲೆಯಲ್ಲಿನ ತಪ್ಪುಗಳಿಂದಾಗಿ ನಝೀಮ್ ಅವರನ್ನು ಲಾಹೋರ್ ನಲ್ಲಿಯೇ ತಡೆಯಲಾಗಿತ್ತು. ಆದರೆ, ಇದೀಗ ನಝೀಮ್ ಲಾಹೋರ್ ವಿಮಾನ ನಿಲ್ದಾಣದಿಂದ, ಆಸೀಪ್ ಕರಾಚಿಯಿಂದ ನಾಪತ್ತೆಯಾಗಿದ್ದಾರೆಂದು ಅವರ ಕುಟುಂಬಸ್ಥರು ಹೇಳುತ್ತಿದ್ದಾರೆ.