ಪಂಚ ರಾಜ್ಯಗಳ ಚುನಾವಣೆಯ ಬಳಿಕ 2018 ರಲ್ಲಿ ಕರ್ನಾಟಕ, ಗುಜರಾತ್ ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು ಬಿಜೆಪಿ ಹೈಕಮಾಂಡ್ ಎರಡೂ ರಾಜ್ಯಗಳಲ್ಲಿ ಅಧಿಕಾರಕ್ಕೆ ಬರಲು ತಯಾರಿ ನಡೆಸುತ್ತಿದೆ. 2018 ರ ಬೆನ್ನಲ್ಲೇ ಲೋಕಸಭೆಗೆ ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ 2019 ರ ಚುನವಾಣೆಗೆ ಈಗಿನಿಂದಲೇ ಮಾರ್ಗಸೂಚಿ ತಯಾರಿಸುತ್ತಿರುವ ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ನಾನೂ ಕುಳಿತುಕೊಳ್ಳುವುದಿಲ್ಲ, ನಿಮ್ಮನ್ನೂ ಕುಳಿತುಕೊಳ್ಳಲು ಬಿಡುವುದಿಲ್ಲ ಎಂಬ ಸಂದೇಶವನ್ನು ಬಿಜೆಪಿ ಸಂಸದೀಯ ಪಕ್ಷದ ಮುಖಂಡರಿಗೆ ನೀಡಿದ್ದಾರೆ.