ಗೋವಾ ಗೆಲುವಿಗೆ ಕಾರಣರಾದ 'ಪಕ್ಷದ ಕಾರ್ಯಕರ್ತ' ರಾಹುಲ್, ದಿಗ್ವಿಜಯ್'ಗೆ ಧನ್ಯವಾದ: ಗಿರಿರಾಜ್ ಸಿಂಗ್

ಗೋವಾ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡು ಗಾಯದ ನೋವಿನಲ್ಲಿರುವ ಕಾಂಗ್ರೆಸ್ ನಾಯಕರಿಗೆ ಬಿಜೆಪಿ ನಾಯಕ ಗಿರಿರಾಜ್ ಸಿಂಗ್ ಅವರು ಹೇಳಿಕೆಯೊಂದನ್ನು ನೀಡುವ ಮೂಲಕ ಗಾಯದ ಮೇಲೆ ಉಪ್ಪನ್ನು ಹಾಕಿದ್ದಾರೆ...
ಬಿಜೆಪಿ ನಾಯಕ ಗಿರಿರಾಜ್ ಸಿಂಗ್
ಬಿಜೆಪಿ ನಾಯಕ ಗಿರಿರಾಜ್ ಸಿಂಗ್
ಮುಂಬೈ: ಗೋವಾ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡು ಗಾಯದ ನೋವಿನಲ್ಲಿರುವ ಕಾಂಗ್ರೆಸ್ ನಾಯಕರಿಗೆ ಬಿಜೆಪಿ ನಾಯಕ ಗಿರಿರಾಜ್ ಸಿಂಗ್ ಅವರು ಹೇಳಿಕೆಯೊಂದನ್ನು ನೀಡುವ ಮೂಲಕ ಗಾಯದ ಮೇಲೆ ಉಪ್ಪನ್ನು ಹಾಕಿದ್ದಾರೆ. 
ಗೋವಾ ಗೆಲವು ಕುರಿತಂತೆ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಗಿರಿರಾಜ್ ಸಿಂಗ್ ಅವರು, ಗೋವಾದಲ್ಲಿ ಬಹುಮತ ಸಾಬೀತು ಪಡಿಸಿರುವ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರಿದೆ ಅಭಿನಂದನೆಗಳು. ಮತ್ತು ನಮ್ಮ ಗೆಲವಿಗೆ ಕಾರಣರಾದ 'ಬಿಜೆಪಿ ಕಾರ್ಯಕರ್ತ'ರಾದ ರಾಹುಲ್ ಗಾಂಧಿ ಹಾಗೂ ದಿಗ್ವಿಜಯ್ ಸಿಂಗ್ ಅವರಿಗೆ ಧನ್ಯವಾದಗಳು ಎಂದು ಹೇಳಿದ್ದಾರೆ.
ಸುಪ್ರೀಂಕೋರ್ಟ್ ನಿರ್ದೇಶನದ ಮೇರೆಗೆ ಕರೆಯಲಾಗಿದ್ದ ವಿಶೇಷ ಅಧಿವೇಶನದಲ್ಲಿ ಗೋವಾದ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರು ಬಹುಮತ ಸಾಬೀತು ಪಡಿಸುವಲ್ಲಿ ಯಶಸ್ವಿಯಾಗಿದ್ದರು. ವಿಶ್ವಾಸ ಮತಯಾಚನೆ ಪ್ರಕ್ರಿಯೆಯಲ್ಲಿ ಪರಿಕ್ಕರ್ ಅವರಿಗೆ 22 ಶಾಸಕರು ಬೆಂಬಲ ಸೂಚಿಸಿದ್ದರೆ, 16 ಶಾಸಕರು ವಿರೋಧ ವ್ಯಕ್ತಪಡಿಸಿದ್ದರು ಮತ್ತು ಓರ್ವ ಶಾಸಕರು ಮತದಾನ ಪ್ರಕ್ರಿಯೆಗೆ ಗೈರು ಹಾಜರಾಗಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com