ಆದರೆ ರೈಲ್ವೇ ಇಲಾಖೆ ಕೇವಲ 42 ಲಕ್ಷ ರುಪಾಯಿಗಳನ್ನು ನೀಡಿದ್ದು, ಇದನ್ನು ಪ್ರಶ್ನಿಸಿ ಸಂಪೂರಣ್ ಸಿಂಗ್ 2012 ರಲ್ಲಿ ನ್ಯಾಯಾಲಯದ ಮೊರೆ ಹೋಗಿದ್ದರು. 2015 ರಲ್ಲಿ ತೀರ್ಪು ಹೊರ ಬಿದ್ದಿದ್ದು, ಆದರೆ ರೈಲ್ವೇ ಇಲಾಖೆ ಈ ಮೊತ್ತವನ್ನು ಪಾವತಿಸಲು ವಿಫಲವಾಗಿತ್ತು. ಅಂತಿಮವಾಗಿ ಮತ್ತೊಮ್ಮೆ ಸಂಪೂರಣ್ ಸಿಂಗ್ ನ್ಯಾಯಾಲಯದ ಮೊರೆ ಹೋಗಿದ್ದು, ಅಮೃತ್ಸರ- ನವದೆಹಲಿ ನಡುವೆ ಸಂಚರಿಸುವ ಸ್ವರ್ಣ ಶತಾಬ್ದಿ ರೈಲಿನ ಮುಟ್ಟುಗೋಲಿಗೆ ನ್ಯಾಯಾಲಯ ಆದೇಶಿಸಿದ್ದು, ರೈಲನ್ನು ಲೂಧಿಯಾನ ರೈಲು ನಿಲ್ದಾಣದಲ್ಲಿ ಐದು ನಿಮಿಷಗಳ ಕಾಲ ತಡೆದು ನಿಲ್ಲಿಸಿದ್ದ ಸಂಪೂರಣ್ ಸಿಂಗ್ ಪ್ರಯಾಣಿಕರಿಗೆ ತೊಂದರೆಯಾಗುತ್ತದೆಂಬ ಕಾರಣಕ್ಕೆ ಬಿಟ್ಟು ಕಳುಹಿಸಿದ್ದಾರೆ. ತಮಗೆ ಬರಬೇಕಿದ್ದ ಪರಿಹಾರ ಬಂದರಷ್ಟೇ ಸಾಕು ಎಂದು ಸಂಪೂರಣ್ ಸಿಂಗ್ ಹೇಳಿದ್ದಾರೆ.