ನವದೆಹಲಿ: ಪಾಕಿಸ್ತಾನದಲ್ಲಿ ಕಾಣೆಯಾಗಿದ್ದ ದೆಹಲಿಯ ಹಜ್ರತ್ ನಿಜಾಮುದ್ದೀನ್ ದರ್ಗಾದ ಇಬ್ಬರು ಭಾರತೀಯ ಸೂಫಿ ಪಾದ್ರಿಗಳು ಪತ್ತೆಯಾಗಿರುವುದರ ಕುರಿತು ಪ್ರತಿಕ್ರಿಯೆ ನೀಡಿರುವ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ತಾನು ಕಾಣೆಯಾಗಿದ್ದ ಪಾದ್ರಿಗಳಲ್ಲೊಬ್ಬರಾದ ಸೈಯದ್ ನಾಜಿಮ್ ಆಲಿ ನಿಜಾಮಿ ಅವರೊಂದಿಗೆ ಮಾತುಕತೆ ನಡೆಸಿದ್ದಾಗಿ ತಿಳಿಸಿದ್ದಾರೆ. ಕರಾಚಿಯಲ್ಲಿ ಸುರಕ್ಷಿತವಾಗಿರುವ ಪಾದ್ರಿಗಳಿಬ್ಬರೂ ನಾಳೆ ದೆಹಲಿಗೆ ಹಿಂತಿರುಗಲಿದ್ದಾರೆ ಎಂದು ಹೇಳಿದ್ದಾರೆ.