ಲಖನೌ: ಉತ್ತರಪ್ರದೇಶದ ವಿಧಾನಸಭೆಯಲ್ಲಿ ಬಿಜೆಪಿ ಭರ್ಜರಿ ಜಯಗಳಿಸಿದ್ದು ಇಂದು ಪ್ರಬಲ ಹಿಂದುತ್ವವಾದಿ ಸಂಸದ ಯೋಗಿ ಆದಿತ್ಯನಾಥ್ ಅವರು 32ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಇನ್ನು ಮುಸ್ಲಿಂ ಅಭ್ಯರ್ಥಿಯನ್ನೇ ಕಣಕ್ಕಿಳಿಸದ ಬಿಜೆಪಿ ಮಾಜಿ ಕ್ರಿಕೆಟಿಗ ಮೊಹ್ಸಿನ್ ರಾಜಾರನ್ನು ಸಂಪುಟಕ್ಕೆ ಸೇರಿಸಿಕೊಂಡಿದ್ದು ಇವರು ಯೋಗಿ ಸಂಪುಟದಲ್ಲಿರುವ ಏಕೈಕ ಮುಸ್ಲಿಂ ಸಚಿವರಾಗಿದ್ದಾರೆ.