ಭಾರತೀಯ ಮುಸ್ಲಿಮರು ರಾಮ ಮಂದಿರ ನಿರ್ಮಾಣದ ವಿರುದ್ಧವಿಲ್ಲ. ಹಲವು ವರ್ಷಗಳಿಂದಲೂ ರಾಮ ಮಂದಿರ ವಿವಾದವಿದೆ. ಈ ವಿಚಾರ ಅತ್ಯಂತ ಸೂಕ್ಷ್ಮ ವಿಚಾರವಾಗಿದೆ. ವಿಚಾರ ಸಂಬಂಧ ನಾವು ಸಂಧಾನ ಮಾಡಿಕೊಳ್ಳಬಹುದಿತ್ತು. ಆದರೆ, ರಾಜಕೀಯ ಪಕ್ಷಗಳು ಮಧ್ಯಪ್ರವೇಶ ಮಾಡುತ್ತಿರುವುದರಿಂದ ಸಮಸ್ಯೆಗೆ ಪರಿಹಾರ ಸಿಗದಂತಾಗಿದೆ. ಹೀಗಾಗಿ ಸುಪ್ರೀಂಕೋರ್ಟ್ ಅಂತಿಮ ತೀರ್ಪನ್ನು ನೀಡಬೇಕಿದೆ.ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಂವಿಧಾನಕ್ಕೆ ಬದ್ಧವಾಗಿರುತ್ತದೆ ಎಂದು ನಾವು ನಂಬಿದ್ದೇವೆಂದು ತಿಳಿಸಿದ್ದಾರೆ.