ಸೋಮವಾರ ರಾಜ್ಯಸಭೆಯಲ್ಲಿ ಹಲವು ಮಹತ್ವದ ವಿಷಯಗಳು ಚರ್ಚೆಯಾಗಬೇಕಿದ್ದು, ಆದರೆ, ಕೆಲ ಸಚಿವರು ಕಲಾಪದಲ್ಲಿ ಇಲ್ಲದಿದ್ದರಿಂದಾಗಿ ಚರ್ಚೆ ನಡೆದಿರಲಿಲ್ಲ. ಪ್ರಶ್ನೋತ್ತರ ವೇಳೆಯಲ್ಲಿ ನಿರ್ಮಲಾ ಸೀತಾರಾಮನ್, ಸಂಜೀವ್ ಬಾಲ್ಯನ್ ಮತ್ತಿತರರು ಮಾತ್ರ ಹಾಜರಿದ್ದರು. ಸಚಿವರ ಗೈರು ಹಾಜರಾತಿ ಕುರಿತಂತೆ ಕಾಂಗ್ರೆಸ್ ರಾಜ್ಯಸಭಾಧ್ಯಕ್ಷ ಹಮೀದ್ ಅನ್ಸಾರಿಗೆ ದೂರು ನೀಡಲಾಗಿತ್ತು. ಪ್ರತಿಪಕ್ಷ ನಾಯಕ ಗುಲಾಂ ನಬಿ ಆಜಾದ್ ಅವರು, ಸಚಿವರ ಗೈರು ಅವರ ನಿರ್ಲಕ್ಷ್ಯತನವನ್ನು ತೋರಿಸುತ್ತದೆ ಎಂದು ಆರೋಪಿಸಿದ್ದರು.