ಈ ವಯಸ್ಸಲ್ಲಿ ತಮ್ಮ ತತ್ವಗಳನ್ನು ಬದಲಾಯಿಸಿ ಕೃಷ್ಣ ತಪ್ಪು ಮಾಡುತ್ತಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ಈ ವಯಸ್ಸಿನಲ್ಲಿ ತಮ್ಮ ತತ್ವಗಳನ್ನು ಬದಲಾಯಿಸುವ ಮೂಲಕ ಕಾಂಗ್ರೆಸ್ ನ ಮಾಜಿ...
ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆ
Updated on
ನವದೆಹಲಿ: ಈ ವಯಸ್ಸಿನಲ್ಲಿ ತಮ್ಮ ತತ್ವಗಳನ್ನು ಬದಲಾಯಿಸುವ ಮೂಲಕ ಕಾಂಗ್ರೆಸ್ ನ ಮಾಜಿ ಹಿರಿಯ ಮುಖಂಡ ಎಸ್.ಎಂ.ಕೃಷ್ಣ ಅವರು ಅತಿದೊಡ್ಡ ತಪ್ಪು ಮಾಡುತ್ತಿದ್ದಾರೆ ಎಂದು ಲೋಕಸಭೆಯ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.
ಕೃಷ್ಣ ಅವರು ಬಿಜೆಪಿಗೆ ಸೇರ್ಪಡೆಯಾಗುತ್ತಿರುವುದಕ್ಕೆ ತೀವ್ರ ಬೇಸರ ವ್ಯಕ್ತಪಡಿಸಿದ ಅವರು, ಎಲ್ಲಾ ಹುದ್ದೆಗಳನ್ನು ಅನುಭವಿಸಿದವರು, ಪಕ್ಷದಲ್ಲಿ ಸ್ಥಾನಗಳನ್ನು ಪಡೆದುಕೊಂಡ ಕಾಂಗ್ರೆಸ್ ನ ಕೆಲವು ನಾಯಕರುಗಳಲ್ಲಿ ಎಸ್.ಎಂ.ಕೃಷ್ಣ ಕೂಡ ಒಬ್ಬರು. ಪಕ್ಷ ಅವರಿಗೆ ಎಲ್ಲವನ್ನೂ ಕೊಟ್ಟಿತ್ತು. ಅಂತವರು ಈ ವಯಸ್ಸಿನಲ್ಲಿ ಈ ನಿರ್ಧಾರ ಏಕೆ ತೆಗೆದುಕೊಳ್ಳುತ್ತಾರೆ ಎಂದು ಗೊತ್ತಾಗುವುದಿಲ್ಲ ಎಂದು ಹೇಳಿದರು.
ಕಳೆದ 50 ವರ್ಷಗಳಿಂದ ಪಾಲಿಸಿಕೊಂಡು ಬಂದ ತತ್ವ, ಆದರ್ಶಗಳನ್ನು ಹೇಗೆ ಬದಲಾಯಿಸುತ್ತಾರೆ ಎಂದು ಗೊತ್ತಾಗುತ್ತಿಲ್ಲ. ಇನ್ನು ಕೆಲ ವರ್ಷಗಳ ಜೀವನವಿದೆಯಷ್ಟೆ. ಈ ಇಳಿ ವಯಸ್ಸಿನಲ್ಲಿ ತಮ್ಮ ತತ್ವಗಳನ್ನು ಬದಲಾಯಿಸಿ ಅತಿದೊಡ್ಡ ತಪ್ಪು ಮಾಡುತ್ತಿದ್ದಾರೆ ಎಂದು ವಿಷಾದ ವ್ಯಕ್ತಪಡಿಸಿದರು.
ದೇಶದ ಹಳೆಯ ಅತಿದೊಡ್ಡ ಪಕ್ಷವಾದ ಕಾಂಗ್ರೆಸ್ ನಲ್ಲಿ ಪರಂಪರೆಯ ನಾಯಕತ್ವವಿದ್ದು ಇತರರ ಮಧ್ಯ ಪ್ರವೇಶಕ್ಕೆ ಅವಕಾಶ ನೀಡುವುದಿಲ್ಲ ಎಂದು ಆರೋಪಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com