ಕೃಷ್ಣ ಅವರು ಬಿಜೆಪಿಗೆ ಸೇರ್ಪಡೆಯಾಗುತ್ತಿರುವುದಕ್ಕೆ ತೀವ್ರ ಬೇಸರ ವ್ಯಕ್ತಪಡಿಸಿದ ಅವರು, ಎಲ್ಲಾ ಹುದ್ದೆಗಳನ್ನು ಅನುಭವಿಸಿದವರು, ಪಕ್ಷದಲ್ಲಿ ಸ್ಥಾನಗಳನ್ನು ಪಡೆದುಕೊಂಡ ಕಾಂಗ್ರೆಸ್ ನ ಕೆಲವು ನಾಯಕರುಗಳಲ್ಲಿ ಎಸ್.ಎಂ.ಕೃಷ್ಣ ಕೂಡ ಒಬ್ಬರು. ಪಕ್ಷ ಅವರಿಗೆ ಎಲ್ಲವನ್ನೂ ಕೊಟ್ಟಿತ್ತು. ಅಂತವರು ಈ ವಯಸ್ಸಿನಲ್ಲಿ ಈ ನಿರ್ಧಾರ ಏಕೆ ತೆಗೆದುಕೊಳ್ಳುತ್ತಾರೆ ಎಂದು ಗೊತ್ತಾಗುವುದಿಲ್ಲ ಎಂದು ಹೇಳಿದರು.