ಸರ್ಕಾರ ರಚನೆಯಾಗಿ ಇನ್ನೂ 3-4 ದಿನಗಳು ಕಳೆದಿವೆಯಷ್ಟೆ, ಧರ್ಮ, ಸಮುದಾಯ, ಜಾತಿಯ ಆಧಾರದಲ್ಲಿ ತಾರತಮ್ಯ ಉಂಟಾಗುವುದಿಲ್ಲ, ಇದನ್ನೇ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಹ ಹೇಳಿದ್ದಾರೆ ಎಂದು ರಾಜನಾಥ್ ಸಿಂಗ್ ಸಂಸತ್ ಗೆ ಹೇಳಿದ್ದಾರೆ. ಹಿಮಾಂಶು ಕುಮಾರ್ ಎಂಬ ಐಪಿಎಸ್ ಅಧಿಕಾರಿ ಟ್ವೀಟ್ ನಲ್ಲಿ ಯಾದವ್ ಎಂಬ ಉಪನಾಮ ಇರುವವರನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಟ್ವೀಟ್ ಮಾಡಿದ್ದರು. ಆದರೆ ನಂತರ ಅದನ್ನು ಡಿಲೀಟ್ ಮಾಡಿದ್ದರು ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸಂಸದೆ ರಂಜೀತ್ ರಂಜನ್ ವಿಷಯವನ್ನು ಸಂಸತ್ ನಲ್ಲಿ ಪ್ರಸ್ತಾಪಿಸಿದ್ದು, ಉತ್ತರ ಪ್ರದೇಶದಲ್ಲಿ ಜಾತಿ ತಾರತಮ್ಯ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.