ಬೆಳಗಿನ ಉಪಹಾರದ ವೇಳೆ ಉತ್ತರ ಪ್ರದೇಶ ಸಂಸದರೊಂದಿಗೆ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶದಲ್ಲಿ ಪಕ್ಷ ಅಭೂತ ಪೂರ್ವ ಗೆಲುವು ಸಾಧಿಸುವುದಕ್ಕೆ ನೆರವಾಗಿದ್ದಕ್ಕೆ ಧನ್ಯವಾದ ಅರ್ಪಿಸಿದ್ದಾರೆ. ಅಷ್ಟೇ ಅಲ್ಲದೇ ಯೋಗಿ ಆದಿತ್ಯನಾಥ್ ಅವರ ಆಡಳಿತದ ಲಕ್ಷ್ಯ ಸುರಾಜ್ಯವನ್ನು ನೀಡುವತ್ತ ಮಾತ್ರ ಕೇಂದ್ರೀಕೃತವಾಗಿರಬೇಕು ಎಂದಿರುವ ಪ್ರಧಾನಿ, ಉತ್ತರ ಪ್ರದೇಶದ ಅಭಿವೃದ್ಧಿಗಾಗಿ ಶಾಸಕರೊಂದಿಗೆ ಜೊತೆಗೂಡಿ ಕೆಲಸ ಮಾಡುವಂತೆ ಹೇಳಿದ್ದಾರೆ.